ಸಿಬಿಐ- ಇಡಿ ತನಿಖೆಗೆ ಬಿಜೆಪಿ ಆಗ್ರಹ
Team Udayavani, Jun 12, 2019, 3:00 AM IST
ಬೆಂಗಳೂರು: ಐಎಂಎ ಜ್ಯುವೆಲ್ಲರ್ ಮಾಲೀಕ ನಾಪತ್ತೆ ಪ್ರಕರಣವನ್ನು ಸಿಬಿಐ ಸೇರಿ ಉನ್ನತ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿರುವ ಬಿಜೆಪಿಯು ಐಎಂಎ ಜುವೆಲ್ಲರ್ ಮಾಲೀಕರಿಗೆ ಉಗ್ರವಾದಿ ಸಂಘಟನೆಗಳೊಂದಿಗೆ ನಂಟಿರುವ ಶಂಕೆಯನ್ನೂ ವ್ಯಕ್ತಪಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಐಎಂಎ ಜ್ಯುವೆಲ್ಲರ್ ಮಾಲೀಕನ ವಂಚನೆಯಿಂದ ಜನರಿಗೆ ಅನ್ಯಾಯವಾಗಿದ್ದು, ಕೂಡಲೇ ಹೂಡಿಕೆದಾರರಿಗೆ ಹಣ ವಾಪಸ್ ನೀಡಬೇಕು. ಶಾಸಕ ರೋಷನ್ ಬೇಗ್ ಇಲ್ಲವೇ ಮತ್ತೂಬ್ಬರ ಹೆಸರನ್ನು ನಾನು ಹೇಳಲು ಇಚ್ಛಿಸುವುದಿಲ್ಲ. ಯಾರೊಬ್ಬರ ಮೇಲೆ ಆರೋಪ ಮಾಡುವುದರ ಬದಲಿಗೆ ಜನರಿಗೆ ಹಣ ಹಿಂದಿರುಗಿಸಬೇಕು. ಮೊದಲಿಗೆ ಆ ಮಾಲೀಕನನ್ನು ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ಹೇಳಿದರು.
ಇದಕ್ಕೆ ದನಿಗೂಡಿಸಿದ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ, ಪೊಲೀಸರು ಯಾವ ಕಾರಣಕ್ಕೆ ಸ್ವಯಂ ಪ್ರೇರಿತರಾಗಿ ತನಿಖೆ ಮಾಡಲಿಲ್ಲ ಎಂದು ಅರ್ಥವಾಗುತ್ತಿಲ್ಲ. ದಾವಣಗೆರೆಯಲ್ಲೂ ಹಗರಣ ನಡೆದಿದೆ. ಅಲ್ಲಿಯೂ ಸುಮಾರು 4000 ಮಂದಿಗೆ ಮೋಸವಾಗಿದೆ. ಒಟ್ಟಾರೆ 3 ಲಕ್ಷ ಮಂದಿಗೆ ಮೋಸವಾಗಿದೆ. ಕೇವಲ ಐದು ಪೊಲೀಸ್ ತಂಡದಿಂದ ತನಿಖೆ ನಡೆಸಲು ಸಾಧ್ಯವಾಗದು. ಪ್ರಕರಣವನ್ನು ಸಿಬಿಐ ಇಲ್ಲವೇ ಜಾರಿ ನಿರ್ದೇಶನಾಲಯ (ಇಡಿ) ವತಿಯಿಂದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಉಗ್ರರ ನಂಟು ಶಂಕೆ: ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಪಿಎಫ್ಐ ಸಂಘಟನೆಗೆ ಐಎಂಎ ಜುವೆಲ್ಲರ್ ಆರ್ಥಿಕ ನೆರವು ನೀಡಿದೆ ಎಂದು ಕೇರಳದ ವ್ಯಕ್ತಿಯೊಬ್ಬರು ಹೇಳಿದ್ದರು. ಮನ್ಸೂರ್ ಖಾನ್ಗೆ ಭಯೋತ್ಪಾದಕರೊಂದಿಗೆ ನಂಟಿರುವ ಶಂಕೆ ಇದೆ. ಇಷ್ಟು ದೊಡ್ಡ ಮೊತ್ತದ ಹಣ ಅವರ ಬಳಿ ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರಕರಣದಲ್ಲಿ ಶಾಸಕ ಆರ್.ರೋಷನ್ ಬೇಗ್, ಸಚಿವ ಜಮೀರ್ ಅಹಮ್ಮದ್ ಖಾನ್ ಹೆಸರು ಕೇಳಿ ಬರುತ್ತಿದ್ದು, ಇವರ ಆಸ್ತಿ ಜಪ್ತಿ ಮಾಡಬೇಕು. ಪ್ರಕರಣವನ್ನು ಸಿಬಿಐ ಇಲ್ಲವೇ ಇಡಿಗೆ ವಹಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ