ಬೆಂಗಳೂರು ಗಲಭೆ: ರಾತ್ರೋರಾತ್ರಿ ಸಿಸಿಬಿ ದಾಳಿ, ಕಾರ್ಪೋರೇಟರ್ ಪತಿ ಸೇರಿ 60 ಮಂದಿಯ ಬಂಧನ
Team Udayavani, Aug 14, 2020, 8:19 AM IST
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾತ್ರೋರಾತ್ರಿ ಹಲವೆಡೆ ದಾಳಿ ನಡೆಸಿದ್ದು, 60 ಮಂದಿಯನ್ನು ವಶಪಡಿಸಿಕೊಂಡಿದ್ದಾರೆ.
ಅಖಂಡ ಶ್ರೀನಿವಾಸ ಮೂರ್ತಿ ಮನೆ, ಡಿಜೆಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಭೆಯ ವಿಡಿಯೋ ಸಾಕ್ಷ್ಯಗಳ ಆಧಾರದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಧ್ಯರಾತ್ರಿಯ ನಂತರ ಮನೆಮನೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 60 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಕಾರ್ಪೋರೇಟ್ ಪತಿ ಅಂದರ್: ಗಲಭೆಗೆ ಸಂಬಂಧಿಸಿದಂತೆ ಕಾರ್ಪೋರೇಟರ್ ಇರ್ಷಾದ್ ಬೇಗಂ ರ ಪತಿ ಕಲೀಂ ಪಾಷಾನನ್ನು ಬಂಧಿಸಲಾಗಿದೆ. ಘಟನೆಗೆ ಮೊದಲು ಈತ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಂದಿದ್ದ ಎಂದು ವರದಿಯಾಗಿದೆ.
ಮಂಗಳವಾರ ರಾತ್ರಿ ನಡೆದ ಈ ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 206 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎರಡು ಠಾಣೆಗಳಲ್ಲಿ 12 ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಎರಡು ಪ್ರಕರಣಗಳನ್ನು ಸಿಸಿಬಿಗೆ ವಹಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು ದಾಳಿ ಪ್ರಕರಣ ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್ ! ಕಾರಣವೇನು ಗೊತ್ತಾ?
ದೂರು ನೀಡಲಿರುವ ಅಖಂಡ ಶ್ರೀನಿವಾಸ ಮೂರ್ತಿ: ಗಲಭೆ ಸಂಬಂಧ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಇಂದು ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿರುವರು. ಆಸ್ತಿಹಾನಿ, ಕೊಲೆ ಯತ್ನ ಮಾಡಿದ್ದಾರೆಂದು ಇಂದು ದೂರು ನೀಡಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್