ಸ್ಮಶಾನದೊಳಗೇ ನೆಮ್ಮದಿ ಜಾಸ್ತಿ’ : ವನಜಾ ಪೂಜಾರಿ ಮಾತು


Team Udayavani, Mar 9, 2019, 2:34 AM IST

89.jpg

ಸ್ಮಶಾನದೊಳಗೇ ನೆಮ್ಮದಿ ಜಾಸ್ತಿ ಇದೆ ಮಾರ್ರೆ… – ಇದು ವೀರ ಮಹಿಳೆ ವಿಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದಿಟಛಿ ಇಲಾಖೆ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕರಿಸಿದ ಉಡುಪಿ ಸ್ಮಶಾನ ಕಾಯುವ ವನಜಾ ಪೂಜಾರಿ ಮಾತು!

ಕಳೆದ 27 ವರ್ಷಗಳಿಂದ ಉಡುಪಿಯ ಬೀಡನಗುಡ್ಡೆ ಹಿಂದೂ ಟ್ರಸ್ಟ್‌ನ ಸ್ಮಶಾನದ ಕಾವಲುಗಾರ್ತಿಯಾಗಿರುವ ವನಜಾ,
ಈವರೆಗೂ 40 ಸಾವಿರಕ್ಕೂ ಅಧಿಕ ಶವಗಳ ದಹನ, 10 ಸಾವಿರಕ್ಕೂ ಹೆಚ್ಚು ಶವಗಳನ್ನು ಮಣ್ಣು ಮಾಡಿದ್ದಾರೆ. 27 ವರ್ಷಗಳ ಹಿಂದೆ ಪತಿ ಪೂವ ಪೂಜಾರಿ ನಿಧನರಾದ ಬಳಿಕ ಯಾರೊಬ್ಬರ ಹಂಗೂ ಬೇಡ ಎಂದು ಆತ ಮಾಡುತ್ತಿದ್ದ ಕಾಯಕವನ್ನೇ ಹೊಟ್ಟೆಪಾಡಿಗೆ ಆರಿಸಿಕೊಂಡರು. ಇಂದಿಗೂ ತನ್ನ 69ರ ಇಳಿ ವಯಸ್ಸಿನಲ್ಲಿಯೂ ನಿತ್ಯ ಬೆಳಗ್ಗೆ 7 ರಿಂದ ಸಂಜೆ 8ರವರೆಗೆ ಸ್ಮಶಾನ ಕಾಯುತ್ತಿದ್ದಾರೆ.

ಇಂದಿಗೂ ನಮ್ಮ ಸಂಸ್ಕೃತಿಯಲ್ಲಿ ಹೆಣ ಸುಡುವಾಗ ಹೆಣ್ಮಕ್ಕಳು ಸ್ಮಶಾನಕ್ಕೆ ಹೋಗುವಂತಿಲ್ಲ. ಆದರೆ, ಈ ಮಹಿಳೆ ಸ್ಮಶಾನವನ್ನೇ ಜೀವನೋಪಾಯ ಮಾಡಿಕೊಂಡಿದ್ದಾರೆ. ಈ ಹಿಂದೆ ರಾತ್ರಿ ಹಗಲು ಎನ್ನದೇ ಶವಶಂಸ್ಕಾರ ಮಾಡುತ್ತಿದ್ದರಂತೆ. ಇವರನ್ನು “ನಿಮಗೆ ಸ್ಮಶಾನದಲ್ಲಿ ಭಯವಾಗುವುದಿಲ್ಲವೇ?” ಎಂದು ಯಾರಾದರೂ ಕೇಳಿದರೆ, “ಹೊರ ಪ್ರಪಂಚಕ್ಕಿಂತ ಸ್ಮಶಾನದೊಳಗೇ ಶಾಂತಿ, ನೆಮ್ಮದಿ ಇದೆ’ ಎನ್ನುತ್ತಾರೆ.

“ಟ್ರಸ್ಟ್‌ ವತಿಯಿಂದ ಕೇವಲ ಮಾಸಿಕ 300 ರೂ.ಸಂಬಳ ಸಿಗುತ್ತಿದೆ. ಇದನ್ನು ಬಿಟ್ಟರೆ ಹೆಣ ತಂದವರು 100 ರೂ. ನಿಂದ 500 ರೂ ವರೆಗೂ ನೀಡುತ್ತಾರೆ. ಇದೇ ಸಂಪಾದನೆಯಿಂದಲೇ ಇಬ್ಬರು ಹೆಣ್ಣುಮಕ್ಕಳ ಮದುವೆ ಮಾಡಿಸಿದ್ದೇನೆ, ಮಗನನ್ನು ಓದಿಸಿ,ಆತ ಈಗ ಸ್ವಯಂ ಉದ್ಯೋಗದಲ್ಲಿದ್ದಾನೆ. ಅವರೆಲ್ಲ ಇಂದು “ಸಾಕು ಈ ಕೆಲಸ ಬಿಟ್ಟು ಮನೆಯಲ್ಲಿ ಆರಾಮವಾಗಿ ಇರಿ, ಎನ್ನುತ್ತಿದ್ದಾರೆ. ಆದರೆ, ನನ್ನ ಕೈಕಾಲು ಗಟ್ಟಿ ಇರೋವರೆಗೂ ನಾನು ಇಲ್ಲಿಯೇ ದುಡಿಯುತ್ತೇನೆ,’ ಎನ್ನುವ ವನಜಾ ಅವರು  ಸರ್ಕಾರ ನಮಗೆ ಈಗಲಾದರೂ ಗುರುತಿಸಿಇಂತಿಷ್ಟು ಮಾಸಿಕ ಸಹಾಯ ಧನ ನೀಡುಬಹುದು ಎಂಬ ನಿರೀಕ್ಷೆ ಹೊಂದಿದ್ದಾರೆ.

ಮಲತಾಯಿಯೊಂದಿಗೆ ಬಾಲ್ಯ ಕಳೆದೆ, ಆನಂತರ ಮದುವೆಯಾಗಿ ಒಂದಿಷ್ಟು ಕಾಲ ಪತಿ ಜತೆಯಿದ್ದೆ. ಬಳಿಕ ಮಕ್ಕಳನ್ನು ಸಾಕುವ ಹೊಣೆಹೊತ್ತು ಪತಿಗೆ ಕೊಟ್ಟ ಮಾತಿನಂತೆ ಇಂದಿಗೂ ಸ್ಮಶಾನ ಕಾಯುತ್ತಿದ್ದೇನೆ. ಕೈಕಾಲು ಗಟ್ಟಿ ಇರೋವರೆಗೂ ಈ ಕಾಯಕ ನಿಲ್ಲಿಸುವುದಿಲ್ಲ.
● ವನಜಾ ಪೂಜಾರಿ, ಸ್ಮಶಾನ ಕಾವಲುಗಾರ್ತಿ

ಮಕ್ಕಳ ಸೇವೆಯಲ್ಲಿ ಮೈಸೂರಿನ ಸೌಮ್ಯ
ತಂದೆ ತಾಯಿಗಳಿಗೆ ಬೇಡವಾದ ಬುದ್ಧಿಮಾಂದ್ಯ ಮಕ್ಕಳು ಸಮಾಜದ ಕೆಟ್ಟಕೆಲಸಗಳಿಗೆ ಬಳಕೆಯಾಗಬಾರದೆಂಬ ಉದ್ದೇಶದಿಂದ ಕಳೆದ 10 ವರ್ಷಗಳಿಂದ 500ಕ್ಕೂ ಹೆಚ್ಚು ಬುದಿಟಛಿಮಾಂದ್ಯ ಮಕ್ಕಳ ಸೇವೆ ಮಾಡುತ್ತಿರುವ “ಕರುಣಾಮಯಿ ಫೌಂಡೇಶನ್‌” ಕಾರ್ಯದರ್ಶಿ ಸೌಮ್ಯ ಈ ಬಾರಿಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಪತಿ 10 ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆನಂತರ ಸಮಾಜ ಸೇವೆಯಲ್ಲಿಯೇ ದಿನಗಳನ್ನು ಕಳೆಯಲು ನಿರ್ಧರಿಸಿದ ಇವರು, 2010ರಲ್ಲಿ ಕರುಣಾಮಯಿ ಫೌಂಡೇಶನ್‌ ಸ್ಥಾಪಿಸಿ ಬುದಿಟಛಿಮಾಂದ್ಯ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮಕ್ಕಳಿಗೆ ಚಿಕಿತ್ಸೆ, ಶಿಕ್ಷಣದ ಜತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿದ್ದಾರೆ. ದಾನಿಗಳ ಸಹಾಯದಿಂದ ಬುದ್ಧಿಮಾಂದ್ಯ ಮಕ್ಕಳ ಆಶ್ರಮ ಹಾಗೂ ಕೌಶಲ್ಯಾಭಿವೃದ್ಧಿ ಕೇಂದ್ರ ಕಟ್ಟಿಸಬೇಕೆಂಬ ಆಸೆ ಹೊಂದಿದ್ದೇನೆ.
● ಸೌಮ್ಯ, ಸಮಾಜ ಸೇವಕಿ

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.