ಮೋದಿ ಅವರಿಂದ ಹೇಳಿಸಿಕೊಳ್ಳಬೇಕಿಲ್ಲ


Team Udayavani, Mar 7, 2019, 12:30 AM IST

hd-kumarswamy.jpg

ಬೆಂಗಳೂರು: “ಪ್ರಧಾನಿಯವರ ಭಾಷೆಯಲ್ಲೇ ಹೇಳುವುದಾದರೆ ನಾನೊಬ್ಬ ರಿಮೋಟ್‌ ಕಂಟ್ರೋಲ್‌ ಮುಖ್ಯಮಂತ್ರಿಯಾಗಿ ಕರ್ನಾಟಕದಲ್ಲಿ ಹಲವಾರು ಅಭಿವೃದಿಟಛಿಪರ ತೀರ್ಮಾನ ಕೈಗೊಂಡು ದೊಡ್ಡಮಟ್ಟದ ಸಾಧನೆ ಮಾಡಿದ್ದೇನೆ. ಅವರಿಂದ ನಾನು ಹೇಳಿಸಿಕೊಳ್ಳಬೇಕಿಲ್ಲ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮೋದಿಗೆ ತಿರುಗೇಟು ನೀಡಿದ್ದಾರೆ.ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಿ ನೀಡುತ್ತಿರುವ ಹೇಳಿಕೆಯನ್ನು ನೋಡಿದರೆ ಬಹುಶಃ ಜನ ಎಚ್ಚರಿಕೆ ವಹಿಸಬೇಕು ಎನಿಸುತ್ತಿದೆ. ಈ ರೀತಿ ಅತ್ಯಂತ ಸುಳ್ಳುಗಳನ್ನು ಹೇಳುವ ಮತ್ತೂಬ್ಬ ಪ್ರಧಾನಿ ದೇಶದಲ್ಲಿ ಬರಲು ಸಾಧ್ಯವಿಲ್ಲ ಎಂದು ಕುಟುಕಿದರು.

ಕರ್ನಾಟಕದಲ್ಲಿ ರಿಮೋಟ್‌ ಕಂಟ್ರೋಲ್‌ ಮುಖ್ಯಮಂತ್ರಿಗಳಾಗಿ ದ್ದಾರೆಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,”ನನ್ನ ಆಡಳಿತದಲ್ಲಿ ಹಲವು ಅಭಿವೃದಿಟಛಿ ಪರ ತೀರ್ಮಾನ ಕೈಗೊಂಡಿದ್ದು, ಆ ಬಗ್ಗೆ ಪ್ರಧಾನಿಯವರಿಗೂ ಮಾಹಿತಿ ಹೋಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲೂ ಇಷ್ಟು ದೊಡ್ಡಮಟ್ಟದ ಸಾಧನೆ ಮಾಡಿದ್ದೇನೆ. ನಾನು ಅವರಿಂದ ಹೇಳಿಸಿಕೊಳ್ಳಬೇಕಿಲ್ಲ. ಅವರಿಗಿಂತಲೂ ದೊಡ್ಡಮಟ್ಟದಲ್ಲಿ ನಾಡಿನ ರಕ್ಷಣೆ ಮಾಡಿಕೊಳ್ಳುವಲ್ಲಿ ನನ್ನ ಕೆಲಸ ನಿರ್ವಹಿಸುತ್ತಿದ್ದೇನೆ’ ಎಂದು ಹೇಳಿದರು. ಪದೇಪದೆ ಕರ್ನಾಟಕದ ಮುಖ್ಯಮಂತ್ರಿಯನ್ನೇ ಗುರಿಯಾಗಿಸಿ ಪ್ರಧಾನಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಭಯವಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂಬ ಪ್ರಧಾನಿ ಟೀಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಇಂದು ಯಾರಿಗಾದರೂ ಮಾಹಿತಿ ಕೊರತೆಯಿದೆ ಎಂದರೆ ಬಹುಶಃ ಅದು ಪ್ರಧಾನಿ ನರೇಂದ್ರ ಮೋದಿಯವರಿಗೆ ಎಂಬುದು ನನ್ನ ಅಭಿಪ್ರಾಯ. ರಾಜ್ಯದಲ್ಲಿ ಈಗಾಗಲೇ ಸಹಕಾರಿ ಬ್ಯಾಂಕ್‌ಗಳಲ್ಲಿ 7 ಲಕ್ಷ ರೈತರ ಸಾಲ ಹಾಗೂ ವಾಣಿಜ್ಯ ಬ್ಯಾಂಕ್‌ಗಳಲ್ಲಿ 6.40 ಲಕ್ಷ ರೈತರ ಸಾಲ ಮನ್ನಾಗೆ ಪ್ರಸಕ್ತ ವರ್ಷದಲ್ಲಿ 11,170 ಕೋಟಿ ರೂ.ಬಿಡುಗಡೆ ಮಾಡಿದ್ದೇನೆ. ಪ್ರಧಾನಿಯವರು ರೈತರ ಸಾಲಮನ್ನಾ ಬಗ್ಗೆ ಹುಡುಗಾಟಿಕೆ ಮಾತುಗಳನ್ನಾ ಡುತ್ತಿದ್ದು, ಅವರಿಗೆ ಮಾಹಿತಿ ಇದೆಯೋ, ಇಲ್ಲವೋ ಗೊತ್ತಿಲ್ಲ. ಮೋದಿಯವರಿಗೆ ಮಾಹಿತಿ ಇಲ್ಲದಿದ್ದರೆ, ನಮ್ಮ ಅಧಿಕಾರಿಗಳನ್ನೇ ಕಳುಹಿಸಿ ಮಾಹಿತಿ ಕೊಡಿಸುತ್ತೇನೆ’ ಎಂದು ಟಾಂಗ್‌ ನೀಡಿದರು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆಯಡಿ ಫ‌ಲಾನು ಭವಿಗಳ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡು ತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಕೇಳಿದ ಮಾಹಿತಿ ನೀಡಿದ್ದೇವೆ. ಆದರೆ, ಕೇಂದ್ರದ ಬಳಿ ರೈತರಿಗೆ ನೀಡಲು ಹಣವಿಲ್ಲ. ನರೇಗಾ ಯೋಜನೆ ಹಣವನ್ನು ರೈತರಿಗೆ ನೀಡಲು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ನರೇಗಾದಿಂದ ಹಣ ಬಂದಿಲ್ಲ
ಕರ್ನಾಟಕಕ್ಕೆ ನರೇಗಾದಡಿ 2,000 ಕೋಟಿ ರೂಗಳನ್ನು ಕೇಂದ್ರ ಸರ್ಕಾರ ನೀಡಬೇಕಿದೆ. ಆದರೆ, ಈವರೆಗೆ ಹಣ ಬಿಡುಗಡೆಮಾಡದ ಕಾ ರಣ ನಾನೇ ರಾಜ್ಯ ಸರ್ಕಾರದಿಂದ ರೈತರಿಗೆ ಕೂಲಿ ಪಾವತಿಸಲು ಹಣ ನೀಡುತ್ತಿದ್ದೇನೆ. ಮೋದಿಯವರಿಗೆ ನರೇಗಾ ಹಣ ನೀಡಲು ಸಾಧ್ಯವಾಗುತ್ತಿಲ್ಲ. ನರೇಗಾ ಹಣವನ್ನು ಡಿಬಿಟಿ ಮೂಲಕ ರೈತರಿಗೆ ಕೊಡಲು ಹೊರಟಿರುವುದು ಪ್ರಧಾನಿ ಕಾರ್ಯಕ್ರಮ. ಆದರೆ, ಕುಮಾರಸ್ವಾಮಿ ಕಾರ್ಯಕ್ರಮಗಳು ನರೇಂದ್ರ ಮೋದಿ ತರದ ಕಾರ್ಯಕ್ರಮಗಳಲ್ಲ. ಮೋದಿ ಸರ್ಕಾರ ಆರ್ಥಿಕ ದಿವಾಳಿ ಸ್ಥಿತಿಗೆ ತಲುಪಿದ್ದು, ನನ್ನ ರಾಜ್ಯ ಆ ಸ್ಥಿತಿಯಲ್ಲಿಲ್ಲ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.