ರಾಜ್ಯದಲ್ಲಿ ಕೋವಿಡ್‌ ಹೆಚ್ಚಳಕ್ಕೆ ಕೇಂದ್ರ ಕಳವಳ; ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.10ರಷ್ಟು ರಾಜ್ಯದ ಕೊಡುಗೆ

Team Udayavani, Aug 6, 2022, 8:57 PM IST

ರಾಜ್ಯದಲ್ಲಿ ಕೋವಿಡ್‌ ಹೆಚ್ಚಳಕ್ಕೆ ಕೇಂದ್ರ ಕಳವಳ; ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಬೆಂಗಳೂರು: ಒಂದು ತಿಂಗಳಿನಲ್ಲಿ ರಾಜ್ಯದಲ್ಲಿ 41 ಸಾವಿರ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ದಿನವೊಂದರ ಪಾಸಿಟಿವ್‌ ದರ ಶೇ.6.32ಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆಯು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ರಾಜ್ಯದಲ್ಲಿ ದಿನವೊಂದಕ್ಕೆ ಸರಾಸರಿ 1,992 ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಾಗಿ ದೇಶದ ಒಟ್ಟು ಪ್ರಕರಣಗಳಲ್ಲಿ ಶೇ. 10.1ರಷ್ಟು ಪ್ರಕರಣಗಳು ರಾಜ್ಯದಿಂದ ವರದಿಯಾಗುತ್ತಿವೆ. ವಾರವೊಂದಕ್ಕೆ ಕೊರೊನಾ ಹೊಸ ಪ್ರಕರಣಗಳಲ್ಲಿ 1.28 ಪಟ್ಟು ಏರಿಕೆ ಕಂಡು ಬರುತ್ತಿದೆ. ಮುಂದಿನ ದಿನದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ.

ಜಿಲ್ಲೆಗಳಲ್ಲಿ ವರದಿಯಾಗುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ ಐಎಲ್‌ಐ ಹಾಗೂ ಸಾರಿ ಪ್ರಕರಣಗಳತ್ತ ಹೆಚ್ಚಿನ ಗಮನ ಹರಿಸಬೇಕು. ಕೊರೊನಾ ರೂಪಾಂತರಿ ಪತ್ತೆಗೆ ಅಂತಾರಾಷ್ಟ್ರೀಯ ಪಾಸಿಟಿವ್‌ ವರದಿಯಾದ ಪ್ರಯಾಣಿಕರಿಗೆ ಹಾಗೂ ಸ್ಥಳೀಯ ಕೊರೊನಾ ಪ್ರಕರಣಗಳನ್ನು ನಿಯಮಾನುಸಾರ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸುವಂತೆ ನಿರ್ದೇಶಿಸಿದೆ. ಜತೆಗೆ ಸಾರ್ವಜನಿಕ ಸ್ಥಳ, ವಾಹನಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸಲು ಆದೇಶಿಸಿದೆ.

ಪರೀಕ್ಷೆ ಹೆಚ್ಚಳಕ್ಕೆ ಆದೇಶ
ರಾಜ್ಯದಲ್ಲಿ ಒಮಿಕ್ರಾನ್‌ ಬಳಿಕ ಕೊರೊನಾ ಪರೀಕ್ಷೆಯನ್ನು ಕಡಿತಗೊಳಿಸಲಾಗಿದೆ. ಈ ಹಿಂದೆ ದಿನವೊಂದಕ್ಕೆ ಸರಾಸರಿ 50,000ರಿಂದ 70,000 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಕಳೆದೊಂದು ತಿಂಗಳಿನಿಂದ 8 ಲಕ್ಷ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದು ದಿನವೊಂದಕ್ಕೆ ಸರಾಸರಿ 25,000ರಷ್ಟಾಗುತ್ತಿದೆ. ಕಡಿಮೆ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವುದರಿಂದ ಸೋಂಕು ಪತ್ತೆಗೆ ಹಿನ್ನಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಸಕ್ರಿಯ ಪ್ರಕರಣ ಹೆಚ್ಚಳ
ದೇಶದಲ್ಲಿ ಒಟ್ಟು 1.34 ಲಕ್ಷ ಕೊರೊನಾ ಪಾಸಿಟಿವ್‌ ಪ್ರಕರಣಗಳಿವೆ. ಕಳೆದೊಂದು ತಿಂಗಳಿನಿಂದ ಅತ್ಯಧಿಕ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ರಾಜ್ಯವಾರು ಪಟ್ಟಿಯಲ್ಲಿ ಮಹಾರಾಷ್ಟ್ರ, ಕೇರಳದ ಬಳಿಕ ಕರ್ನಾಟಕ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ 11,786 ಸಕ್ರಿಯ ಪ್ರಕರಣಗಳಿದ್ದು, ಸಕ್ರಿಯ ಸೋಂಕಿನ ದರ ಶೇ. 0.28 ಹಾಗೂ ಮರಣ ಪ್ರಮಾಣವು ಶೇ.1ರಷ್ಟು ವರದಿಯಾಗಿದೆ.

14 ಜಿಲ್ಲೆಯಲ್ಲಿ ಪ್ರಕರಣ ಏರಿಕೆ
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಶೇ.5ಕ್ಕಿಂತ ಅಧಿಕ ಕೋವಿಡ್‌ ಪಾಸಿಟಿವ್‌ ದರ ಪಟ್ಟಿಯಲ್ಲಿ ಬೆಂಗಳೂರು ನಗರ ಶೇ.9.55 ಸಹಿತ ರಾಜ್ಯದ 14 ಜಿಲ್ಲೆಗಳು ಸೇರ್ಪಡೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಇದೆ. ತಿಂಗಳ ಹಿಂದೆ ಬೆರಳೆಣಿಕೆ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಲ್ಲಿ ಸಹ 100ಕ್ಕಿಂತ ಅಧಿಕ ಪ್ರಕರಣ ವರದಿಯಾಗುತ್ತಿರುವುದು ಆತಂಕ ವ್ಯಕ್ತವಾಗಿದೆ.

ಉಪತಳಿ ಹೆಚ್ಚಳ
ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳಲ್ಲಿ ಆಯ್ದ ಮಾದರಿಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಒಳಪಡಿಸಲಾಗುತ್ತಿದೆ. ಕಳೆದೊಂದು ತಿಂಗಳಲ್ಲಿ ಸುಮಾರು 920 ಮಾದರಿಗಳಲ್ಲಿ ಕೋವಿಡ್‌ ಉಪತಳಿಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.