ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ: ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ
Team Udayavani, Aug 29, 2020, 9:07 AM IST
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸರಣಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಕೋವಿಡ್ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ.
“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ”ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೋವಿಡ್ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ ಎಂದರು.
ತಾಳ ತಪ್ಪಿದ ಕೇಂದ್ರಸರ್ಕಾರದ ದಿಕ್ಕೆಟ್ಟ ಅರ್ಥವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ. ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ RBIನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!