Central vs State Govt: ವಿಧಾನಸಭೆಯಲ್ಲಿ 2 ಪ್ರಮುಖ ನಿರ್ಣಯಗಳ ಅನುಮೋದನೆ

ವಿಪಕ್ಷಗಳಿಗೆ ಸುಳಿವು ನೀಡದೆಯೇ ಮಂಡನೆ: ಬಾವಿಗಿಳಿದು ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

Team Udayavani, Feb 23, 2024, 6:15 AM IST

1–ww-eqqw

ಬೆಂಗಳೂರು: ಕೇಂದ್ರ ಸರಕಾರದ ವಿರುದ್ಧ ಎರಡು ಪ್ರಮುಖ ನಿರ್ಣಯಗಳನ್ನು ವಿಧಾನಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆದು ಕೊಂಡಿ ರುವ ರಾಜ್ಯ ಸರಕಾರವು ಬಿಜೆಪಿ-ಜೆಡಿಎಸ್‌ ವಿಪಕ್ಷ ಮೈತ್ರಿಕೂಟವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆರ್ಥಿಕ ಸಂಪನ್ಮೂಲಗಳ ಸಮಾನಹಂಚಿಕೆ ಮತ್ತು ತಾರತಮ್ಯ ರಾಹಿತ್ಯದ ನಿಲುವುಗಳನ್ನು ಕೇಂದ್ರ ಸರಕಾರ ತೆಗೆದು ಕೊಳ್ಳಬೇಕೆಂದು ರಾಜ್ಯ ಒತ್ತಾಯಿಸಿದೆ. ಅಲ್ಲದೆ ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಸರಕಾರ ಶಾಸನ ರೂಪಿಸುವಂತೆಯೂ ಒತ್ತಾಯಿಸಿದೆ.

ಸದನದಲ್ಲಿ ನಿರ್ಣಯ ಮಂಡನೆಯಾಗುತ್ತಿದ್ದರೂ ತಡವಾಗಿ ಎಚ್ಚೆತ್ತುಕೊಂಡ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ರಾಜ್ಯ ಸರಕಾರದ ನಿರ್ಣಯದ ವಿರುದ್ಧ ಧರಣಿ ನಡೆಸಿದರು. ಧರಣಿ ನಡುವೆಯೇ ಎರಡೂ ನಿರ್ಣಯಗಳನ್ನು ಅನುಮೋದಿಸಿ ಕಲಾಪ ವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ತಡವಾಗಿ ಎಚ್ಚೆತ್ತ ವಿಪಕ್ಷ
ಗುರುವಾರ ಸಂಜೆ ಕಾಂಗ್ರೆಸ್‌ನ ಪ್ರಕಾಶ್‌ ಕೋಳಿವಾಡ ಅವರು ಕರ್ನಾಟಕ ಮೋಡ ಬಿತ್ತನೆ ಮಸೂದೆ-2024ನ್ನು ಮಂಡಿಸುತ್ತಿದ್ದರು. ವಿಪಕ್ಷಗಳಿಗೆ ಖಾಸಗಿ ಮಸೂದೆಯ ಪ್ರತಿಯನ್ನೇ ನೀಡಿಲ್ಲ ಎಂದು ಗದ್ದಲ ಸೃಷ್ಟಿಯಾಗುತ್ತಿದ್ದಂತೆ ಎಲ್ಲರಿಗೂ ಪ್ರತಿಯನ್ನು ವಿತರಣೆ ಮಾಡಲಾಗುತ್ತಿತ್ತು. ತತ್‌ಕ್ಷಣ ಎದ್ದುನಿಂತ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಕೇಂದ್ರದ ವಿರುದ್ಧ ಮೊದಲ ನಿರ್ಣಯವನ್ನು ಓದಲು ಆರಂಭಿಸಿದರು. ಇದರ ಪರಿವೆಯೇ ಇಲ್ಲದ ವಿಪಕ್ಷ ಸದಸ್ಯರು ಖಾಸಗಿ ಮಸೂದೆಯ ಅಂಶಗಳ ಅಧ್ಯಯನದಲ್ಲಿ ತೊಡಗಿದ್ದರು.
ಅಷ್ಟರಲ್ಲಾಗಲೇ ನಿರ್ಣಯದ ಅರ್ಧಭಾಗವನ್ನು ಸಚಿವ ಪಾಟೀಲ್‌ ಓದಿ ಆಗಿತ್ತು. ತತ್‌ಕ್ಷಣ ಬಿಜೆಪಿಯ ಯತ್ನಾಳ್‌ ತಮ್ಮವರನ್ನು ಎಚ್ಚರಿಸಿದರು.

ಅನಂತರ ಪ್ರಶ್ನಿಸಲು ಮುಂದಾದ ವಿಪಕ್ಷ ನಾಯಕ ಆರ್‌. ಅಶೋಕ್‌, ಸದಸ್ಯರಾದ ಸುನಿಲ್‌ ಕುಮಾರ್‌, ಎಸ್‌. ಸುರೇಶಕುಮಾರ್‌ ರಾಜ್ಯ ಸರಕಾರದ ನಿರ್ಣಯದ ವಿರುದ್ಧ ಪ್ರಶ್ನೆಗಳ ಸುರಿಮಳೆಗರೆದರು. ಬಾವಿಗೆ ಬಂದು ಧರಣಿ ಆರಂಭಿಸಿದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಂಧಾನಸಭೆಯಲ್ಲೂ ಕೋಲಾಹಲ
ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಇಂಥ ದ್ದೊಂದು ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚಿಸಿಲ್ಲ, ಕಲಾಪದ ಕಾರ್ಯಸೂಚಿ ಪಟ್ಟಿಯಲ್ಲೂ ಇದನ್ನು ಸೇರಿಸಿಲ್ಲ. ಏಕಾಏಕಿ ನಿರ್ಣಯ ಮಂಡಿಸಿದರೆ ಹೇಗೆ? ಕೇಂದ್ರ ಸರಕಾರವನ್ನು ಬಜೆಟ್‌ನಲ್ಲಿ ಬೈದದ್ದು ಸಾಲದೇ? ಇದೆಂಥ ದುರಾಡಳಿತ ಎಂದರಲ್ಲದೆ ಯೋಗ್ಯತೆ ಇಲ್ಲದ ಕಾಂಗ್ರೆಸ್‌ ಸರಕಾರಕ್ಕೆ ಧಿಕ್ಕಾರ ಎಂದು ಕೂಗಲಾರಂಭಿಸಿದರು. ವಿಪಕ್ಷಗಳ ಧರಣಿ ನಡುವೆಯೇ ಎರಡೂ ನಿರ್ಣಯಕ್ಕೆ ಅನುಮೋದನೆ ನೀಡಲಾಯಿತು. ಗದ್ದಲ ಏರ್ಪಟ್ಟಿದ್ದರಿಂದ 10 ನಿಮಿಷ ಕಲಾಪ ಮುಂದೂಡಿದ ಸ್ಪೀಕರ್‌ ಖಾದರ್‌ ಸಂಧಾನ ಸಭೆ ನಡೆಸಿದರು. ಅಲ್ಲಿಯೂ ಸ್ಪೀಕರ್‌ ಮತ್ತು ಸರಕಾರದ ಕ್ರಮಕ್ಕೆ ವಿಪಕ್ಷಗಳ ಪ್ರಮುಖ ನಾಯಕರು ವಿರೋಧ ವ್ಯಕ್ತಪಡಿಸಿದರು. ಪುನಃ ಸಮಾವೇಶಗೊಂಡ ಕಲಾಪದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿರಲಿಲ್ಲ. ಇದೇ ಕಾರಣ ಕೊಟ್ಟು ಶುಕ್ರವಾರಕ್ಕೆ ಕಲಾಪವನ್ನು ಮುಂದೂಡಲಾಯಿತು.

ನಿರ್ಣಯಗಳ ಸಾರಾಂಶವೇನು?
ಕೇಂದ್ರ ಬಿಜೆಪಿ ಸರಕಾರದ 10 ವರ್ಷಗಳ ಆಡಳಿತದಲ್ಲಿ ರಾಜ್ಯಕ್ಕೆ ಅನ್ಯಾಯ.
2017-18ರಿಂದ 1.87 ಲಕ್ಷ ಕೋಟಿ ರೂ. ರಾಜ್ಯ ಸರಕಾರಕ್ಕೆ ನಷ್ಟ.
ಆರ್ಥಿಕ ಸಂಪನ್ಮೂಲ ತಾರತಮ್ಯ ರಹಿತವಾಗಿ, ಸಮಾನವಾಗಿ ಹಂಚಿಕೆ ಆಗಬೇಕು.
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಶಾಸನಬದ್ಧವಾಗಿ ನಿಗದಿಯಾಗಬೇಕು.
ರೈತರೊಂದಿಗೆ ಸಂಘರ್ಷ ನಡೆಸದೆ ನ್ಯಾಯ ಯುತ ವಾಗಿ ಕೇಂದ್ರ ನಡೆದುಕೊಳ್ಳಬೇಕು.

ಕರ್ನಾಟಕ, ಕನ್ನಡಿಗರು, ರೈತರಿಗೆ ಅನ್ಯಾಯ ಮಾಡಬೇಕೆಂದೇ ಬಿಜೆಪಿಯವರು ಹುಟ್ಟಿದ್ದೀರಿ. ಕರ್ನಾಟಕ ಹಾಗೂ ರೈತರ ಹಿತವನ್ನೇ ವಿರೋಧಿಸುತ್ತಿದ್ದೀರಿ. ಕನಿಷ್ಠ ಬೆಂಬಲ ಬೆಲೆಗೆ ಬೇಡಿಕೆ ಇರಿಸಿದ ರೈತರನ್ನು ಗುಂಡಿಟ್ಟು ಕೊಲ್ಲಲಾಗುತ್ತಿದೆ. ರೈತರ ಶವದ ಮೇಲೆ ಕೇಂದ್ರ ಸರಕಾರದವರು ಆಡಳಿತ ಮಾಡುತ್ತಿದ್ದಾರೆ.
– ಕೃಷ್ಣ ಬೈರೇಗೌಡ, ಕಂದಾಯ ಸಚಿವ

ಕೇಂದ್ರ ಸರಕಾರದ ಮೇಲೆ ಪದೇಪದೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವು ಕಾರ್ಕೋಟಕ ವಿಷಕಾರುವ ವಿಷಜಂತುವಿನಂತಾಗಿದೆ. ಆಡಳಿತ ಮಾಡಲು ಯೋಗ್ಯತೆ ಇಲ್ಲದ ಮೇಲೆ ಬಿಟ್ಟಿಳಿಯಿರಿ. ಕದ್ದುಮುಚ್ಚಿ ನಿರ್ಣಯ ತಂದ ಹೇಡಿಗಳು. ನಾಚಿಕೆ ಆಗಬೇಕು. ಇದೊಂದು ನಾಲಾಯಕ್‌ ಸರಕಾರ. ತಾಕತ್ತಿದ್ದರೆ ಕಲಾಪ ಕಾರ್ಯಸೂಚಿ ಪಟ್ಟಿಯಲ್ಲಿ ನಿರ್ಣಯದ ಬಗ್ಗೆ ಉಲ್ಲೇಖಿಸಬೇಕಿತ್ತು.
– ಆರ್‌. ಅಶೋಕ್‌, ವಿಧಾನಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.