ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 50 ಸಾವಿರ ಪರಿಹಾರ


Team Udayavani, Sep 23, 2021, 7:10 AM IST

ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 50 ಸಾವಿರ ಪರಿಹಾರ

ಹೊಸದಿಲ್ಲಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂಬ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರಕಾರ ತಲಾ 50 ಸಾವಿರ ರೂ. ಘೋಷಿಸಿದೆ. ಈ ಮೊತ್ತವನ್ನು ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದಿಂದ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಲಭಿಸಲಿದೆ ಎಂದು ಹೇಳಿದೆ.

ಈ ಕುರಿತು ಬುಧವಾರ ಸುಪ್ರೀಂ ಕೋರ್ಟ್‌ಗೆ ಅಫಿದವಿತ್‌ ಸಲ್ಲಿಸಿರುವ ಕೇಂದ್ರ ಸರಕಾರ, ಈ ಪರಿಹಾರ ಇದುವರೆಗೆ ಮೃತಪಟ್ಟಿರುವವರಿಗಷ್ಟೇ ಅಲ್ಲದೆ ಮುಂದೆ ಸಾವನ್ನಪ್ಪಿದರೆ ಅಂಥವರ ಕಟುಂಬಕ್ಕೂ ಸಿಗಲಿದೆ ಎಂದು ತಿಳಿಸಿದೆ.

ಕಾರ್ಯಾಚರಣೆ ವೇಳೆ ಮೃತಪಟ್ಟರೂ ಪರಿಹಾರ ಲಭ್ಯ:

ಕೊರೊನಾದಿಂದ ಸಾವನ್ನಪ್ಪಿರುವವರ ಜತೆಗೆ, ಸೋಂಕಿನ ನಿಯಂತ್ರಣದಲ್ಲಿ ಭಾಗಿಯಾದವರು ಅಥವಾ ನಿಯಂತ್ರಣಕ್ಕೆ ಸಿದ್ಧತೆ ವೇಳೆ ಸಾವನ್ನಪ್ಪಿರುವವರಿಗೂ ಪರಿಹಾರ ಸಿಗಲಿದೆ. ಕೇಂದ್ರ ಸರಕಾರ ರೂಪಿಸಿರುವ ಮಾರ್ಗಸೂಚಿಗಳ ಪ್ರಕಾರವೇ ನೀಡಲಾಗುವುದು ಎಂದು ಹೇಳಿದೆ.

ಮೃತರ ಕುಟುಂಬಗಳು ದಾಖಲೆ, ಮರಣ ಪ್ರಮಾಣ ಪತ್ರ ಸಲ್ಲಿಸಬೇಕು. ಹೀಗೆ ಸಲ್ಲಿಸಿದ ಅರ್ಜಿಯ ಪರಿಶೀಲನೆ, ಒಪ್ಪಿಗೆ ಮತ್ತು ವಿತರಣೆಯ ಕೆಲಸವನ್ನು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರಗಳು ನಡೆಸಲಿವೆ.

ಆಧಾರ್‌ ಸಂಪರ್ಕಿಸಲಾಗುತ್ತಿದ್ದು,  ನೇರವಾಗಿ ಕುಟುಂಬ ಸದಸ್ಯರ ಬ್ಯಾಂಕ್‌ ಖಾತೆಗೇ ಹಣ ಹೋಗಲಿದೆ. ಈ ಬಗ್ಗೆ ಏನೇ ಗೊಂದಲ, ಸಮಸ್ಯೆಗಳಿದ್ದರೆ ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ  ನೋಡಿಕೊಳ್ಳಲಿದೆ.

ಲಂಡನ್‌: ಪ್ರಮಾಣಪತ್ರಕ್ಕಿಲ್ಲ  ಒಪ್ಪಿಗೆ! :

ಹೊಸದಿಲ್ಲಿ /ಲಂಡನ್‌: ಭಾರತ ಮತ್ತು ಯುನೈಟೆಡ್‌ ಕಿಂಗ್‌ಡಮ್‌ ನಡುವಿನ ಕ್ವಾರಂಟೈನ್‌ ಬಿಕ್ಕಟ್ಟು ಹೊಸ ಮಜಲು ಪ್ರವೇಶಿಸಿದೆ. ಕೊವಿಶೀಲ್ಡ್‌ಗೆ ಮಾನ್ಯತೆ ಕೊಟ್ಟಿರುವ ಯುಕೆ, ಭಾರತದ ಪ್ರಮಾಣ ಪತ್ರ ಒಪ್ಪಲು ಸಾಧ್ಯವಿಲ್ಲ ಎಂದಿದೆ. ಜತೆಗೆ ಭಾರತೀಯರು ಲಸಿಕೆ ಹಾಕದ ರಾಷ್ಟ್ರಗಳ ಪ್ರಜೆಗಳಿಗೆ ಅನುಸರಿಸಿರುವ ನಿಯಮ ಪಾಲನೆ ಮಾಡಬೇಕಾಗುತ್ತದೆ ಎಂದಿದೆ. ಭಾರತದ ಆಕ್ಷೇಪಣೆ ಹಿನ್ನೆಲೆಯಲ್ಲಿ ನಿಯಮ ಬದಲಿಸಿರುವ ಯುಕೆ, ಇಡೀ ಬೆಳವಣಿಗೆಯನ್ನು ಮತ್ತಷ್ಟು ಗೋಜಲಾಗಿಸಿದೆ. ಯುಕೆ ಸರಕಾರದ ವಾದವನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಆರ್‌. ಶರ್ಮಾ ತಿರಸ್ಕರಿಸಿದ್ದಾರೆ. ಕೋವಿನ್‌ ಆ್ಯಪ್‌ ಅಥವಾ ವೆಬ್‌ಸೈಟ್‌ ಮೂಲಕ ನೀಡಲಾಗುವ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಮಾಣಪತ್ರ ನೀಡುವಿಕೆಯಲ್ಲಿ ಯು.ಕೆ. ಸರಕಾರ ಆರೋಪಿ ಸಿದಂಥ ಯಾವುದೇ ಅಂಶಗಳಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿದ ನಿಯಮಗಳ ಪ್ರಕಾರವೇ ಅದನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಭಾರತಕ್ಕಿಲ್ಲ  ಫೈಜರ್‌, ಮಾಡೆರ್ನಾ :

ಭಾರತದಲ್ಲೇ ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಉತ್ಪಾದನೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಅಮೆರಿಕದ ಫೈಜರ್‌ ಮತ್ತು ಮಾಡೆರ್ನಾ ಲಸಿಕೆಗಳನ್ನು ತರಿಸುವ ಪ್ರಕ್ರಿಯೆಯನ್ನು ಕೈಬಿಟ್ಟಿದೆ. ಅಲ್ಲದೆ ಭಾರತದ ಕಾನೂನಿನಿಂದ ರಕ್ಷಣೆ ನೀಡಬೇಕು ಎಂಬ ಈ ಎರಡೂ ಕಂಪೆನಿಗಳ ವಾದವನ್ನು ತಿರಸ್ಕರಿಸಿದೆ. ಈ ಮೊದಲು ಲಸಿಕೆ ಕೊರತೆ ಇದ್ದ ಕಾರಣ ತರಿಸಿಕೊಳ್ಳಲು ನಿರ್ಧರಿಸಿದ್ದೆವು. ಈಗ ನಮ್ಮಲ್ಲೇ ಹೆಚ್ಚು ಉತ್ಪಾದನೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.