ಏಳು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಶತಕ

ಒಂದೇ ದಿನ ಮೂರು ಸಾವು; ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,418

Team Udayavani, May 28, 2020, 12:14 AM IST

ಏಳು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಶತಕ

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ 4.0 ಜಾರಿಯ ಬಳಿಕ ಅಂದರೆ ಕಳೆದ ಹತ್ತು ದಿನಗಳಲ್ಲಿ ಏಳು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಶತಕದ ಗಡಿ ದಾಟಿದ್ದು, ಒಟ್ಟು 1,271 ಮಂದಿ ಸೋಂಕಿತರಾಗಿದ್ದಾರೆ. ಈ ಏಳು ಜಿಲ್ಲೆಗಳು ಆರಂಭದಲ್ಲಿ ಬೆರಳೆಣಿಕೆ ಸೋಂಕಿಗೆ ಸಾಕ್ಷಿಯಾಗಿದ್ದರೂ, ಈಗ ಒಂದೇ ಸವನೆ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಲಾಕ್‌ಡೌನ್‌ 3.0 ಮೇ 17ಕ್ಕೆ ಮುಕ್ತಾಯಗೊಂಡಾಗ ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಕಲಬುರಗಿ ಸೇರಿ ಮೂರು ಜಿಲ್ಲೆಗಳಲ್ಲಿ ಮಾತ್ರ ಸೋಂಕು ನೂರರ ಗಡಿ ದಾಟಿತ್ತು. ಲಾಕ್‌ಡೌನ್‌ 4.0 (ಮೇ 18 ರಿಂದ 27ರ ವರೆಗೆ) ಜಾರಿ ಬಳಿಕ ಯಾದಗಿರಿ, ಮಂಡ್ಯ, ದಾವಣಗೆರೆ, ಹಾಸನ, ಚಿಕ್ಕಬಳ್ಳಾಪುರ, ಬೀದರ್‌, ಉಡುಪಿ ಸೇರಿ ಏಳು ಜಿಲ್ಲೆಗಳು ಶತಕದ ಗಡಿ ದಾಟಿವೆ. ಹತ್ತು ದಿನಗಳ ಸೋಂಕಿತರಲ್ಲಿ ಶೇ. 80ರಷ್ಟು ಮಂದಿ ಹೊರರಾಜ್ಯದ, ಶೇ. 3ರಷ್ಟು ಮಂದಿ ಹೊರದೇಶ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.

ಒಟ್ಟಾರೆಯಾಗಿ ರಾಜ್ಯದ 29 ಜಿಲ್ಲೆಗಳಲ್ಲಿ 2,418 ಸೋಂಕು ಪ್ರಕರಣ ದೃಢಪಟ್ಟಿದ್ದು, 1,588 ಸಕ್ರಿಯ ಪ್ರಕರಣಗಳಿವೆ. ಬುಧವಾರ 135 ಮಂದಿ ಸೋಂಕಿತರಾಗಿದ್ದಾರೆ.  ಒಟ್ಟಾರೆಯಾಗಿ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು ಯಾದಗಿರಿ, ಬೀದರ್‌ ಹಾಗೂ ವಿಜಯಪುರದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈ ಮೂಲಕ ಸೋಂಕು ಚಿಕಿತ್ಸೆ ಫ‌ಲಕಾರಿಯಾಗದೇ ಸಾವಿಗೀಡಾದವರ ಸಂಖ್ಯೆ 47ಕ್ಕೆ ಹೆಚ್ಚಳವಾಗಿದೆ.
ಬಹುತೇಕರು ಹೊರರಾಜ್ಯದಿಂದ ಬಂದವರು ಬುಧವಾರ ದೃಢಪಟ್ಟ 135 ಸೋಂಕಿತರ ಪೈಕಿ 116 ಮಂದಿ ಸೋಂಕಿತರು ಹೊರರಾಜ್ಯದಿಂದ, ಇಬ್ಬರು ಹೊರದೇಶದಿಂದ ಕರ್ನಾಟಕಕ್ಕೆ ಆಗಮಿಸಿದ್ದವರು. ಕಲಬುರಗಿ (28), ಯಾದಗಿರಿ (16), ಹಾಸನ (15), ಬೀದರ್‌ (13), ದಕ್ಷಿಣ ಕನ್ನಡ (11) , ಉಡುಪಿ (9) ಜಿಲ್ಲೆಗಳಲ್ಲಿ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಎಲ್ಲ ಜಿಲ್ಲೆಗಳಿಗೂ ಬಹುತೇಕ ಸೋಂಕಿತರು ಮಹಾರಾಷ್ಟ್ರದಿಂದ ಬಂದಿದ್ದಾರೆ.
ಸೋಂಕಿತರ ಪೈಕಿ 17 ಮಂದಿ ಬುಧವಾರ ಗುಣ ಮುಖರಾಗಿದ್ದಾರೆ.

ಕ್ವಾರಂಟೈನ್‌ಗೆ ಒಪ್ಪದ ಯುವತಿ: ಹಲ್ಲೆಗೆ ಯತ್ನ
ಕ್ವಾರಂಟೈನ್‌ ಆಗಲು ನಿರಾಕರಿಸಿ ಪೊಲೀಸರ ಮೇಲೆ ಕೈ ಮಾಡಲು ಮುಂದಾಗಿದ್ದ ಯುವತಿ ವಿರುದ್ಧ ನಗರ ರೈಲು ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹರಿಯಾಣ ಮೂಲದ 25 ವರ್ಷದ ಯುವತಿ ದಿಲ್ಲಿಯಿಂದ ಸ್ಪೆಷಲ್‌ ಸೂಪರ್‌ ಫಾಸ್ಟ್‌ ರೈಲಿನಲ್ಲಿ ನಗರದ ರೈಲು ನಿಲ್ದಾಣಕ್ಕೆ ಬಂದಿಳಿದಿದ್ದರು. ರಾಜ್ಯ ಸರಕಾರದ ಆದೇಶದಂತೆ ಹೊರರಾಜ್ಯದಿಂದ ಬಂದಿದ್ದರಿಂದ ಯುವತಿಗೆ ಕ್ವಾರಂಟೈನ್‌ ಆಗುವಂತೆ ಬಿಬಿಎಂಪಿ ಸಿಬಂದಿ ಸೂಚಿಸಿದ್ದರು. ಅದನ್ನು ನಿರಾಕರಿಸಿದ ಆಕೆ ವಾಗ್ವಾದಕ್ಕಿಳಿದು ಕರ್ತವ್ಯ ನಿರತ ಪೊಲೀಸರು ಹಾಗೂ ಸಿಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಳು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.