ಸಿಇಟಿ ಕರಡು ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟ: 12 ಸಾವಿರ ಸೀಟು ಕಡಿತ


Team Udayavani, Sep 15, 2022, 6:25 AM IST

ಸಿಇಟಿ ಕರಡು ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟ: 12 ಸಾವಿರ ಸೀಟು ಕಡಿತ

ಬೆಂಗಳೂರು: ರಾಜ್ಯದಲ್ಲಿರುವ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಸೀಟುಗಳ ಆಧಾರದಲ್ಲಿ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ (ವಾಸ್ತುಶಿಲ್ಪ)ಕೋರ್ಸ್‌ಗಳ ಕರಡು ಸೀಟ್‌ ಮಾಟ್ರಿಕ್ಸ್‌ ಅನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಆ ಪ್ರಕಾರ ಕಳೆದ ವರ್ಷಕ್ಕಿಂತ ಅಂದಾಜು 12 ಸಾವಿರ ಸರಕಾರಿ ಸೀಟು ಕಡಿಮೆಯಾಗಿದೆ.

ಕಳೆದ ವರ್ಷ ಸುಮಾರು 65 ಸಾವಿರ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಾಗಿದ್ದವು. ಈ ಪೈಕಿ 33 ಸಾವಿರ ಸೀಟುಗಳು ಭರ್ತಿಯಾಗಿದ್ದು, 32 ಸಾವಿರ ಸೀಟುಗಳು ಉಳಿಕೆಯಾಗಿದ್ದವು. ಈ ವರ್ಷ ಸದ್ಯ ಕರಡು ಸೀಟ್‌ ಮ್ಯಾಟ್ರಿಕ್ಸ್‌ ಅನ್ನು ಪ್ರಕಟಿಸಿದ್ದು, ಒಟ್ಟಾರೆ 1,11,322 ಸೀಟುಗಳು ಲಭ್ಯವಾಗಿದ್ದು, ಈ ಪೈಕಿ 53,108 ಸರಕಾರಿ ಸೀಟುಗಳು ಲಭ್ಯವಾಗಲಿವೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಎಐಸಿಟಿಇ ಮತ್ತು ಕೌನ್ಸಿಲ್‌ ಆಫ್ ಆರ್ಕಿಟೆಕ್ಟರ್‌ ಕ್ರಮವಾಗಿ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳಿಗೆ ನೀಡಿರುವ ಅನುಮೋದಿತ ಇನ್‌ಟೇಕ್‌ನಂತೆ ರಾಜ್ಯದಲ್ಲಿರುವ ವೃತ್ತಿಪರ ಸಂಸ್ಥೆಗಳಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಕೈಗೊಳ್ಳಬೇಕಿದೆ. ಅದರನ್ವಯ ಕರಡು ಸೀಟ್‌ ಮ್ಯಾಟ್ರಿಕ್ಸ್‌ ಅನ್ನು ಪ್ರಕಟಿಸಲಾಗಿದೆ.

ಸರಕಾರಿ, ಅನುದಾನಿತ, ಖಾಸಗಿ ಕಾಲೇಜು, ಖಾಸಗಿ ಅನುದಾನಿತ ಅಲ್ಪಸಂಖ್ಯಾಕ ಕಾಲೇಜುಗಳು, ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಲಭ್ಯವಿರುವ ಸರಕಾರಿ ಕೋಟಾ, ಖಾಸಗಿ ಕೋಟಾ ಮತ್ತು ಮ್ಯಾನೇಜ್‌ಮೆಂಟ್‌ ಸೀಟುಗಳ ವಿವರಗಳನ್ನು ಸಲ್ಲಿಸಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಇದರಲ್ಲಿ ಯಾವುದಾದರೂ ಲೋಪದೋಷಗಳಿದ್ದಲ್ಲಿ ಸಾರ್ವಜನಿಕರು ಮತ್ತು ಶಿಕ್ಷಣ ಸಂಸ್ಥೆಗಳು 5 ದಿನಗಳೊಳಗೆ [email protected][email protected] , [email protected]ಗೆ ಸಲ್ಲಿಸಬಹುದು ಎಂದು ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಎಂಜಿನಿಯರಿಂಗ್‌ ಸೀಟುಗಳು
ವಿಭಾಗ ಒಟ್ಟಾರೆ ಸೀಟು ಸರಕಾರಿ ಸೀಟು
ಸರಕಾರಿ ಕಾಲೇಜು 5,140 5,140
ಅನುದಾನಿತ ಕಾಲೇಜು 3,200 3,040
ಖಾಸಗಿ ಕಾಲೇಜು 74,872 33,707
ಅಲ್ಪಸಂಖ್ಯಾಕ 8,910 3,564
ಖಾಸಗಿ ಅನುದಾನ ರಹಿತ 17,160 7,03
ಡೀಮ್ಡ್ ವಿಶ್ವವಿದ್ಯಾನಿಲಯ 2,040 627
ಒಟ್ಟು 1,11,322 53,108

ವಾಸ್ತುಶಿಲ್ಪ
ವಿಭಾಗ ಒಟ್ಟಾರೆ ಸೀಟು ಸರಕಾರಿ ಸೀಟು
ಸರಕಾರಿ ಕಾಲೇಜು 38 38
ಖಾಸಗಿ 1890 851
ಖಾಸಗಿ ವಿಶ್ವವಿದ್ಯಾನಿಲಯ 300 126
ಒಟ್ಟಾರೆ 2,228 1,015

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.