ಸಿಇಟಿ ಪರೀಕ್ಷೆ ಮುಂದೂಡಿಕೆ: ದಿನಾಂಕ ಮರು ನಿಗದಿ
Team Udayavani, May 12, 2021, 3:25 PM IST
Representative Image used
ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ.
ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಇದನ್ನೂ ಓದಿ:ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಪದವೀಧರರು!
ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಬೆಳಗ್ಗೆ (10.30ರಿಂದ 11.15ರವರೆಗೆ) ಜೀವಶಾಸ್ತ್ರ, ಮಧ್ಯಾಹ್ನ (2.30ರಿಂದ 3.50ರವರೆಗೆ) ಗಣಿತ ಪರೀಕ್ಷೆ ನಡೆಯಲಿದೆ.
ಆಗಸ್ಟ್ 29ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ.
ಇದೇ ವೇಳೆ ಜುಲೈ 9ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆಯು ಆಗಸ್ಟ್ 30 ರಂದು ನಡೆಯಲಿದೆ. (11.30 ರಿಂದ 12.30)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ