ಸಿಇಟಿ: ದಾಖಲಾತಿ ಪರಿಶೀಲನೆಗೆ ಅವಕಾಶ ನೀಡಿದ ಕೆಇಎ
Team Udayavani, Sep 10, 2022, 10:45 PM IST
ಬೆಂಗಳೂರು: ಸಿಇಟಿ-2022ನೇ ಸಾಲಿನ ಅಭ್ಯರ್ಥಿಗಳು ಸಲ್ಲಿಸಿರುವ ವ್ಯಾಸಂಗ ಪತ್ರಗಳಲ್ಲಿ ವ್ಯತ್ಯಾಸವಿದ್ದರೆ ಸರಿಪಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮತ್ತೊಂದು ಅವಕಾಶ ನೀಡಿದೆ.
ಸೆ.12 ಮತ್ತು 13ರಂದು ಸಂಬಂಧಪಟ್ಟ ಬಿಇಒ ಕಚೇರಿಗಳಲ್ಲಿ ಸರಿಪಡಿಸಿಕೊಳ್ಳಬಹುದಾಗಿದೆ. ಕೆಲವು ಅಭ್ಯರ್ಥಿಗಳು ಪರಿಶೀಲನೆಗೆ ಒಳಪಡಿಸಿದಾಗ ವ್ಯಾಸಂಗ ಪ್ರಮಾಣ ಪತ್ರ ಅಥವಾ ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ ಅಥವಾ ಗ್ರಾಮೀಣ ಪ್ರದೇಶ ವ್ಯಾಸಂಗ ಪ್ರಮಾಣ ಪತ್ರಗಳಲ್ಲಿ ವ್ಯತ್ಯಾಸವಿದೆ. ಅಂತಹ ಅಭ್ಯರ್ಥಿಗಳು ಅವಶ್ಯವಿದ್ದಲ್ಲಿ ಮತ್ತೊಮ್ಮೆ ಬಿಇಒ ಕಚೇರಿಗಳಿಗೆ ತೆರಳಿ ಸರಿಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.
ಉದಾ: ಅಭ್ಯರ್ಥಿಯು 1ರಿಂದ 4 ನೇ ತರಗತಿವರೆಗೆ ಒಂದು ಶಾಲೆಯಲ್ಲಿ ವ್ಯಾಸಂಗ ಮಾಡಿರುವುದಾಗಿ ಅರ್ಜಿಯಲ್ಲಿ ನಮೂದಿಸಿದ್ದು, ಆದರೆ ಬಿಇಓ ಕಚೇರಿಯಲ್ಲಿ 1 ರಿಂದ 3 ರವರೆಗೆ ಮಾತ್ರ ಪರಿಶೀಲಿಸಲಾಗಿದೆ. ಕಾರಣ 4 ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಶಾಲೆ ಬೇರೆಯಾಗಿದ್ದು, ಆ ಬಿಇಒ ಅಧಿಕಾರ ವ್ಯಾಪ್ತಿಗೆ ಬಂದಿರುವುದಿಲ್ಲ. ಹೀಗಾಗಿ ಸಂಬಂಧ ಪಟ್ಟ ಬಿಇಒ ಕಚೇರಿಗೆ ತೆರಳಿ ಪತ್ರಗಳನ್ನು ಪಡೆದುಕೊಳ್ಳಲು ಕೆಇಎ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ