ಹೊಸ ವಿವಾದಕ್ಕೆ ಕಾರಣವಾಯಿತು ಚಡ್ಡಿಸುಡುವ ಅಭಿಯಾನ: ಸಿದ್ದರಾಮಯ್ಯ ವಿರುದ್ಧ ದೂರು
Team Udayavani, Jun 17, 2022, 2:18 PM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ತಲೆಯ ಮೇಲೆ ಚಡ್ಡಿಹೊತ್ತು ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದ್ದ ನಾರಾಯಣಸ್ವಾಮಿ ವಿರುದ್ಧ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ಆರ್ ಎಸ್ಎಸ್ ಚಡ್ಡಿಹೊರುವ ಕೆಲಸವನ್ನು ದಲಿತರಿಗೆ ನೀಡಿದೆ, ಪಠ್ಯ ಪರಿಷ್ಕರಣೆ ಹೊಣೆಯನ್ನು ಚಕ್ರತೀರ್ಥ ಅವರಿಗೆ ನೀಡಿದೆ. ನಾರಯಣ ಸ್ವಾಮಿಯವರೇ ಗುಲಾಮಿ ಮನಸ್ಥಿತಿಯಿಂದ ಹೊರಬನ್ನಿ ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ:ಮೋದಿ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ; ಡಾ. ಕೆ. ಲಕ್ಷ್ಮಣ್
ಈ ಹೇಳಿಕೆಯಿಂದ ಕೆರಳಿದ್ದ ನಾರಾಯಣಸ್ವಾಮಿ ಅವರು, ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಆರೋಪಿಸಿದ್ದರು. ಈಗ ಮುಂದುವರಿದು ಸಿದ್ದರಾಮಯ್ಯ ವಿರುದ್ಧ ದಲಿತ ದೌರ್ಜನ್ಯ ಪ್ರಕರಣವನ್ನು ಬೆಂಗಳೂರಿನಲ್ಲಿ ದಾಖಲಿಸಿದ್ದಾರೆ. ಇದು ಹೊಸ ರಾಜಕೀಯ ವಿವಾದ ಸೃಷ್ಟಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್