ಚಡ್ಡಿ ಹಾಕುವ ಎಲ್ಲರನ್ನೂ ಅಪಮಾನಿಸಿದ ಸಿದ್ದರಾಮಯ್ಯ : ಛಲವಾದಿ ನಾರಾಯಣಸ್ವಾಮಿ
Team Udayavani, Jun 7, 2022, 5:44 PM IST
ಬೆಂಗಳೂರು: ಚಡ್ಡಿ ಹಾಕುವವರು ಮಿಲಿಟರಿಯಲ್ಲಿ, ಪೊಲೀಸ್ ವ್ಯವಸ್ಥೆಯಲ್ಲೂ ಹಿಂದೆ ಇದ್ದರು. ಕರ್ಮಚಾರಿಗಳೂ ಚಡ್ಡಿ ಹಾಕುತ್ತಾರೆ. ರೈತರೆಲ್ಲರೂ ಚಡ್ಡಿ ಧರಿಸುತ್ತಾರೆ. ಚಡ್ಡಿ ಹಾಕುವ ಎಲ್ಲರನ್ನೂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಇಂದು “ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಅವರ ಮನೆಗೆ ತಲುಪಿಸುವ ಆಂದೋಲನ”ದಲ್ಲಿ ಅವರು ಮಾತನಾಡಿದರು. ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದ ಗಾಂಧಿ ಭವನದಿಂದ ಸಿದ್ದರಾಮಯ್ಯರವರ ಮನೆಗೆ ತೆರಳುವ ಕಾರ್ಯಕ್ರಮ ಇದಾಗಿತ್ತು.
ವಿರೋಧ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು ಇತ್ತೀಚೆಗೆ ಚಡ್ಡಿ ಸುಡುವ ಆಂದೋಲನ ಮಾಡುವುದಾಗಿ ತಿಳಿಸಿದ್ದರು. ಆರೆಸ್ಸೆಸ್ ಅಥವಾ ಬಿಜೆಪಿಯನ್ನು ಗುರಿ ಮಾಡಿ ಹೀಗೆ ಹೇಳಿದ್ದಾರೆ. ಆರೆಸ್ಸೆಸ್ನವರು ಪ್ಯಾಂಟ್ ಹಾಕಲು ಆರಂಭಿಸಿ ಆರೇಳು ವರ್ಷಗಳಾಗಿವೆ. ಕಾಲ ಬಂದಂತೆ ನಾವು ಬದಲಾಗಿದ್ದೇವೆ. ಚಡ್ಡಿ ಎಂಬುದು ಮಾನವಕುಲದ ಗೌರವ ಕಾಪಾಡುತ್ತದೆ. ಇದನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ತಿಳಿಸಿದರು.
ಇದನ್ನೂ ಓದಿ: 8 ವರ್ಷದಲ್ಲಿ ಮೋದಿ ಸರ್ಕಾರ ನಿರುದ್ಯೋಗಿ ಯುವ ಜನರಿಗೆ ನರಕ ತೋರಿಸಿದೆ : ಸಿದ್ದು ವಾಗ್ದಾಳಿ
ಕಾಂಗ್ರೆಸ್ ಪಕ್ಷದವರ ಎಲ್ಲವನ್ನೂ ಕಿತ್ತುಕೊಂಡಿದ್ದು, ಇರುವ ಚಡ್ಡಿಯನ್ನು ಮಾತ್ರ ಸುಟ್ಟು ನೀವ್ಯಾಕೆ ಬೆತ್ತಲಾಗುತ್ತೀರಿ ಎಂದು ಕೇಳಿದ್ದೆವು. ಆದರೂ ಅದನ್ನು ಕೇಳದೆ ಚಡ್ಡಿ ಸುಟ್ಟಿದ್ದಾರೆ. ಎಸ್ಸಿ ಮೋರ್ಚಾವು ರಾಜ್ಯದಾದ್ಯಂತ ಸಿದ್ದರಾಮಯ್ಯನವರ ಹೆಸರಿನಲ್ಲಿ ಚಡ್ಡಿಗಳನ್ನು ಸಂಗ್ರಹಿಸುತ್ತಿದೆ. ಸಾಂಕೇತಿಕವಾಗಿ ನಾವು ಇವತ್ತು ಚಡ್ಡಿಗಳನ್ನು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.
ಇದು ಬಿಜೆಪಿ ಚಡ್ಡಿಯಲ್ಲ ಎಂದ ಅವರು, ಚಡ್ಡಿ ತಯಾರಿಕೆ ಹಿಂದಿನ ಶ್ರಮವನ್ನು ಅವರು ತಿಳಿದುಕೊಳ್ಳಬೇಕು. ಜನರು ಕೋವಿಡ್ ಸಾಂಕ್ರಾಮಿಕದ ಬಳಿಕ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಚಡ್ಡಿ ಸುಟ್ಟರೂ ಮಾಲಿನ್ಯ ಉಂಟಾಗುತ್ತದೆ. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಚಡ್ಡಿ ಸುಡಬೇಕು. ಇಲ್ಲವಾದರೆ ಮಾಲಿನ್ಯ ಉಂಟು ಮಾಡಿದ ಸಿದ್ದರಾಮಯ್ಯರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ನವರಿಗೆ ಬೇರೇನೂ ಕೆಲಸ ಇಲ್ಲ. ಇನ್ನು ಚಡ್ಡಿ ಸುಟ್ಟುಕೊಂಡೇ ಇರಲಿ ಎಂದರಲ್ಲದೆ, ಈ ದೇಶದ ಗೌರವವನ್ನೂ ಈ ಚಡ್ಡಿ ಕಾಪಾಡುತ್ತದೆ. ಆರೆಸ್ಸೆಸ್ನಂಥ ಸಂಘಟನೆ ಇರದಿದ್ದರೆ ನಿಮ್ಮ ಚಡ್ಡಿ ಉಳಿಯುತ್ತಿರಲಿಲ್ಲ ಎಂದು ನುಡಿದರು. ಕಾಂಗ್ರೆಸ್ ಇದುವರೆಗೆ ದೇಶದಲ್ಲಿ ಅಧಿಕಾರದಲ್ಲಿ ಇರುತ್ತಿದ್ದರೆ ಅವರವರ ಚಡ್ಡಿಯನ್ನು ಅವರವರೇ ಹುಡುಕಾಡಿ ನೋಡಿಕೊಳ್ಳಬೇಕಾಗುತ್ತಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು