ಸ್ವಾಭಿಮಾನವಿದ್ದರೆ ಸಚಿವ ಸ್ಥಾನಕ್ಕೆ ಮಹಾದೇವಪ್ಪ ರಾಜೀನಾಮೆ ನೀಡಲಿ: ನಾರಾಯಣಸ್ವಾಮಿ
Team Udayavani, Mar 16, 2024, 1:22 PM IST
ವಿಜಯಪುರ : ದಲಿತರಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ಹಣವನ್ನು ದಲಿತರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದ್ದರೂ ಧ್ವನಿ ಎತ್ತದೇ ದಲಿತ ಸಂಘಟನೆಗಳು ಎಲ್ಲಿ ಹೋದವು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ದಲಿತ ಸಂಘಟನೆಗಳ ಧ್ವನಿಯೇ ಅಡಗಿಹೋಗಿದೆ. ದಲಿತ ಸಂಘಟನೆಗಳು ಈಗ ಎಲ್ಲಿ ಹೋಗಿವೆ ಹುಡುಕಿ ಕೊಡಿ ಎಂದು ಬಿಜೆಪಿ ವಕ್ತಾರ ಛಲವಾದಿ ನಾರಾಯಣಸ್ವಾಮಿ ಕುಟುಕಿದ್ದಾರೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಬಹಳ ಮಾತನಾಡುವ ಸಿದ್ಧರಾಮಯ್ಯ ದಲಿತರಿಗೆ ಮೀಸಲಿದ್ದ ಎಸ್ಇಪಿ-ಟಿಎಸ್ಪಿ ಹಣ ಬೇರೆ ಯಾವುದಕ್ಕೋ ಬಳಸಿಕೊಂಡಿದ್ದಾರೆ. ಇಷ್ಟಾದರೂ ಒಂದಿಬ್ಬರನ್ನು ಬಿಟ್ಟರೆ ದಲಿತ ಸಂಘಟನೆಗಳು, ಮುಖಂಡರು ಬಾಯಿ ಮುಚ್ಚಿಕೊಂಡಿರುವುದೇಕೆ ಎಂದು ಅವರೇ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಓಟ್ ನಮ್ಮದು ನಾಯಕತ್ವ ಅವರದು ಎಂದು ಸಚಿವ ಮಹಾದೇವಪ್ಪ ಈಗ ಮಾತನಾಡುತ್ತಿದ್ದಾರೆ. ಈ ಹಿಂದೆ ಸಿದ್ಧರಾಮಯ್ಯ ಅವರಿಗೆ ನಮ್ಮ ಸಮುದಾಯಕ್ಕೂ ಎರಡೂವರೆ ವರ್ಷ ಮುಖ್ಯಮಂತ್ರಿ ಅವಕಾಶ ಕೊಡಿ ಎಂದು ನಾನು ಧ್ವನಿ ಎತ್ತಿದಾಗ ಇದೇ ಮಹದೇವಪ್ಪ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎನ್ನುವ ಮೂಲಕ ಸಿದ್ಧರಾಮಯ್ಯ ಅವರನ್ನು ಬೆಂಬಲಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಸಿದ್ದಾರಾಮಯ್ಯ-ಮಹಾದೇವಪ್ಪ ಮಧ್ಯೆ ಸಂಬಂಧ ಹಳಸಿರುವ ಕಾರಣಕ್ಕೆ ದಲಿತರು ಓಟ್ ಬ್ಯಾಂಕ್ ಎಂದು ಧ್ವನಿ ಎತ್ತಿದ್ದಾರೆ. ಮಹಾದೇವಪ್ಪ ಅವರಿಗೆ ಸ್ವಾಭಿಮಾನವಿದ್ದರೆ ಕಾಂಗ್ರೆಸ್ ಸರ್ಕಾರದಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಲಿ ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯಾ ನಂತರ ಕರ್ನಾಟಕದಲ್ಲಿ ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡೇ ಬಂದಿದೆ. ಬಿ.ಬಸವಲಿಂಗಪ್ಪ, ಕೆ.ಎಚ್.ರಂಗನಾಥ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ, ಬಿ.ರಾಚಯ್ಯ ಅವರಂಥ ನಾಯಕರಿಗೆ ಮುಖ್ಯಮಂತ್ರಿ ಆಗುವ ಅವಕಾಶವನ್ನು ಕಾಂಗ್ರೆಸ್ ತಪ್ಪಿಸಿದೆ ಎಂದು ಕಿಡಿ ಕಾರಿದರು.
ಐಎನ್ಡಿಐಎ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸುತ್ತಲೇ ವಿರೋಧಿಸಿದ್ದು ಇದೇ ಸಿದ್ಧರಾಮಯ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನೇ ಅಂತ್ಯ ಕಾಲದಲ್ಲೂ ಅತ್ಯಂತ ಅವಮಾನಕರ ರೀತಿಯಲ್ಲಿ ನಡೆಸಿಕೊಂಡ ಕಾಂಗ್ರೆಸ್ ಇದೀಗ ಖರ್ಗೆ ಅವರನ್ನು ನಿಮ್ಮ ಮನೆ ಬಾಗಿಲು ಕಾಯಲು ಇರಿಸಿಕೊಂಡಿದೆ ಎಂದು ಟೀಕಿಸಿದರು.
ನಿಜಕ್ಕೂ ಡಾ.ಮಹದೇವಪ್ಪ ಅವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಸರ್ಕಾರದಿಂದ ಹೊರ ಬರಬೇಕು, ಇಲ್ಲವಾದಲ್ಲಿ ಓರ್ವ ಸ್ವಾರ್ಥಿ ಎನಿಸಿಕೊಳ್ಳಲಿದ್ದಾರೆ ಎಂದ ಚಲವಾದಿ ನಾರಾಯಣಸ್ವಾಮಿ, ಬಿಹಾರದಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿದ್ದು ನಮ್ಮದೇ ಬಿಜೆಪಿ ಪಕ್ಷ ಎಂದು ಸಮರ್ಥಸಿಕೊಂಡದರು.
ಇದನ್ನೂ ಓದಿ: Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ