ಅಧಿವೇಶನಕ್ಕೆ ಸವಾಲು
Team Udayavani, Jan 27, 2021, 6:40 AM IST
ಬೆಂಗಳೂರು: ರೈತರ ಪ್ರತಿಭಟನೆ, ಹುಣಸೋಡು ಸ್ಫೋಟ, ಕೆಪಿಎಸ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ, ಸಂಪುಟ ವಿಸ್ತರಣೆ ಮತ್ತು ಖಾತೆಗಾಗಿ ಹಗ್ಗ ಜಗ್ಗಾಟಗಳ ನಡುವೆ ಗುರುವಾರ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಸರಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗುತ್ತಿದ್ದರೆ, ತಿರುಗೇಟು ನೀಡಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ.
7 ದಿನ ನಡೆಯಲಿರುವ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಲವ್ ಜೆಹಾದ್ ಕಾನೂನು ಪ್ರಸ್ತಾವದ ಸಾಧ್ಯತೆಯೂ ಇದೆ. ಹೀಗಾಗಿ ವರ್ಷದ ಮೊದಲ ಅಧಿವೇಶನ ವಾಕ್ಸಮರ – ಕೋಲಾಹಲಕ್ಕೆ ಸಾಕ್ಷಿಯಾಗಬಹುದು.
ವಿಧಾನಪರಿಷತ್ನ ಉಪ ಸಭಾಪತಿ ಚುನಾವಣೆಯೂ ನಿಗದಿಯಾಗಿದೆ. ವಿಧಾನಪರಿಷತ್ನಲ್ಲಿ ನಡೆದ ಕಹಿ ವಿದ್ಯಮಾನಗಳ ಕುರಿತು ಸದನ ಸಮಿತಿ ವರದಿ ಸಲ್ಲಿಸಿದೆ. ವರದಿ ಮಂಡನೆಯಾದರೆ ಪರಿಷತ್ನಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಬಹುದು.
60 ದಿನ ಕಲಾಪ? :
ವರ್ಷಕ್ಕೆ 60 ದಿನ ಅಧಿವೇಶನ ನಡೆಸಬೇಕು ಎಂದು ತೀರ್ಮಾನ ಮಾಡಲಾಗಿದ್ದರೂ 2002ರಿಂದ ಇದು ವರೆಗೆ ಅಷ್ಟು ದಿನ ನಡೆದೇ ಇಲ್ಲ. ಈ ವರ್ಷವಾದರೂ 60 ದಿನ ಅಧಿವೇಶನ ನಡೆಯುತ್ತದೆಯೇ ಎಂಬ ಪ್ರಶ್ನೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ