ಪ್ರಾಣವಾಯು ಮಹತ್ವ ಸಾರಿದ 2021


Team Udayavani, Dec 30, 2021, 2:16 PM IST

ಪ್ರಾಣವಾಯು ಮಹತ್ವ ಸಾರಿದ 2021

2021 ಪೂರ್ಣಗೊಳ್ಳಲು ಇನ್ನು ಒಂದೇ ದಿನ ಮಾತ್ರ ಬಾಕಿ ಇದೆ. ಜಿಲ್ಲೆ ಇತಿಹಾಸದಲ್ಲಿ ಒಂದೇ ದುರ್ಘ‌ಟನೆಯಲ್ಲಿ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡ ವರ್ಷವೂ 2021 ಆಗಿದೆ. 35ಕ್ಕೂ ಹೆಚ್ಚು ಮಂದಿ ಅಸುನೀಗಿದ ಆಕ್ಸಿಜನ್‌ ದುರಂತವು ರಾಜ್ಯದ ಗಮನ ಸೆಳೆದು ಕೊರೊನಾ ಸಾವು ತಡೆಗೆ ಆಕ್ಸಿಜನ್‌ ಸಂಗ್ರಹಿಸಿಟ್ಟುಕೊಳ್ಳುವಲ್ಲಿ ಎಚ್ಚರಿಕೆಯ ಸಂದೇಶ ನೀಡಿತು

ಚಾಮರಾಜನಗರ ಜಿಲ್ಲೆಯ ಪಾಲಿಗೆ 2021 ಮರೆಯಲಾಗದ ವರ್ಷ. ಘೋರ ದುರ್ಘ‌ಟನೆಯೊಂದು ಕರಿನೆರಳಿನಂತೆ ಸದಾ ಕಾಡುವ ವರ್ಷ. ಕೋವಿಡ್‌ 2ನೇ ಅಲೆಯ ಸಂದರ್ಭದಲ್ಲಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕ್ಸಿಜನ್‌ ದೊರಕದೇ 35ಕ್ಕೂ ಹೆಚ್ಚು ಮಂದಿ ಮೃತಪಟ್ಟರು. ಆಕ್ಸಿಜನ್‌ ದುರಂತ ನಡೆದ ದಿನ ಹೊರತುಪಡಿಸಿ ಅನಂತರದ ಎರಡು ಮೂರು ದಿನಗಳ ಸಾವನ್ನೂ ಲೆಕ್ಕಕ್ಕೆ ತೆಗೆದುಕೊಂಡರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚುತ್ತದೆ. ಹೀಗಾಗಿ ಜಿಲ್ಲೆಯ ಇತಿಹಾಸದಲ್ಲಿ, ಒಂದೇ ದುರ್ಘ‌ಟನೆಯಲ್ಲಿ ಅತಿ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡ ವರ್ಷವೂ 2021 ಆಗಿದೆ. 2021, ಮೇ 2ರಂದು ರಾತ್ರಿ 10.30ರಲ್ಲಿ ಕೋವಿಡ್‌ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಉಂಟಾಗಿ, ಐಸಿಯು, ವೆಂಟಿಲೇಟರ್‌ನಲ್ಲಿ ವೈದ್ಯಕೀಯ ಆಮ್ಲಜನಕ ಪಡೆಯುತ್ತಿದ್ದ 35ಕ್ಕೂ ಹೆಚ್ಚು ಮಂದಿ ಮೃತಪಟ್ಟರು. ಅಂದು ರಾತ್ರಿಯ ವೇಳೆಗೆ ವೈದ್ಯಕೀಯ ಆಮ್ಲಜನಕ ಮುಗಿದು ಹೋಗಲಿದೆ ಎಂಬ ಸಂಗತಿ ಆಸ್ಪತ್ರೆಯ ಅಧಿಕಾರಿಗಳಿಗೆ, ಜಿಲ್ಲಾಡಳಿತಕ್ಕೆ ತಿಳಿದಿತ್ತು. ಅಷ್ಟರೊಳಗೆ ಮೈಸೂರಿನಿಂದ ವೈದ್ಯಕೀಯ ಆಮ್ಲಜನಕ ಸಿಲಿಂಡರ್‌ ತರಿಸುವ ಬಗ್ಗೆ ಜಿಲ್ಲಾಡಳಿತ ಗಮನವನ್ನೇ ಹರಿಸಲಿಲ್ಲ. ತತ್ಪರಿಣಾಮ 35 ಕ್ಕೂ ಮಂದಿ ಕೋವಿಡ್‌ ರೋಗಿಗಳು, ಆಮ್ಲಜನಕ ಕೊರತೆಯಿಂದಾಗಿ ಮೃತಪಟ್ಟರು. ವಿಪರ್ಯಾ ಸವೆಂದರೆ ಇದುವರೆಗೂ ಈ ದುರ್ಘ‌ಟನೆಗೆ ಹೊಣೆ ಮಾಡಿ ಯಾರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ! ನ್ಯಾಯಾಂಗ ತನಿಖೆ ಆದೇಶಿಸಿತು. ಅದರ ವರದಿ ಇನ್ನೂ ಬಂದಿಲ್ಲ. ಇನ್ನು, ಕೋವಿಡ್‌ ಮೊದಲನೇ ಅಲೆಗಿಂತ ಎರಡನೇ ಅಲೆ ಜಿಲ್ಲೆಯನ್ನು ಹೆಚ್ಚು ಬಾಧಿಸಿತು.

ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಎರಡನೇ ಅಲೆಯಲ್ಲಿ ಹೆಚ್ಚಿದ್ದವು. ಪ್ರತಿದಿನದ ಪ್ರಕರಣಗಳು ಎರಡನೇ ಅಲೆಯಲ್ಲಿ 450ರ ಮೇಲಿದ್ದವು. ಮೊದಲನೇ ಅಲೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್‌ನಿಂದ 132 ಮಂದಿ ಮೃತಪಟ್ಟಿದ್ದರು. ಎರಡನೇ ಅಲೆಯಲ್ಲಿ 389 ಮಂದಿ ಮೃತಪಟ್ಟರು. ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದ ಒಟ್ಟು 521 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 32,677 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಇವರಲ್ಲಿ 32,129 ಮಂದಿ ಗುಣಮುಖರಾಗಿದ್ದಾರೆ.

ರಾಷ್ಟ್ರಪತಿ ಭೇಟಿ: ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅ.7ರಂದು ಭೇಟಿ ನೀಡಿ ಸರ್ಕಾರಿ ವೈದ್ಯಕೀಯ ಕಾಲೇಜು ಬೋಧನಾ ಆಸ್ಪತ್ರೆ ಉದ್ಘಾಟಿಸಿದ್ದು ಜಿಲ್ಲೆಯ ಈ ವರ್ಷದ
ಪ್ರಮುಖ ವಿದ್ಯಮಾನ. ತದನಂತರ ಜಿಲ್ಲಾ ಕೇಂದ್ರದ ಹೃದಯ ಭಾಗದಲ್ಲಿದ್ದ ಜಿಲ್ಲಾಸ್ಪತ್ರೆಯ ಎಲ್ಲ ಚಟುವಟಿಕೆಗಳೂ ಚಾ.ನಗರದಿಂದ 6 ಕಿ.ಮೀ. ದೂರದ ಎಡಬೆಟ್ಟದ ಬಳಿಯ ನೂತನ
ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ವರ್ಗಾವಣೆ ಯಾಗಿವೆ.

ಯುಪಿಎಸ್‌ಸಿ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಳ್ಳದ ಮಾದಹಳ್ಳಿ ಗ್ರಾಮದ ಪ್ರಮೋದ್‌ ಆರಾಧ್ಯ ಯುಪಿಎಸ್‌ಸಿ ಪರೀಕ್ಷೆಯಲ್ಲಿ 601ನೇ ರ್‍ಯಾಂಕ್‌ ಪಡೆದದ್ದು ವಿಶೇಷ. ಈ ವರ್ಷದ ಅಕ್ಟೋಬರ್‌ ನವೆಂಬರ್‌ ತಿಂಗಳಲ್ಲಿ ಉತ್ತಮ ಮಳೆಯಾಗಿ ಜಿಲ್ಲೆಯ ಸುವರ್ಣಾವತಿ, ಚಿಕ್ಕಹೊಳೆ, ಗುಂಡಾಲ್‌, ಉಡುತೊರೆಹಳ್ಳ ಜಲಾಶಯಗಳು ಅನೇಕ ವರ್ಷಗಳ ನಂತರ ಭರ್ತಿಯಾದವು.

– ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.