ಚಾಮರಾಜಪೇಟೆ ಮೈದಾನವು ಕಂದಾಯ ಇಲಾಖೆ ಆಸ್ತಿ: ಬಿಬಿಎಂಪಿ
Team Udayavani, Aug 8, 2022, 6:35 AM IST
ಬೆಂಗಳೂರು: ಚಾಮರಾಜಪೇಟೆ ಮೈದಾನವು ಕಂದಾಯ ಇಲಾಖೆ ಆಸ್ತಿ ಎಂದು ಘೋಷಿಸುವ ಮೂಲಕ ಈ ಕುರಿತಾಗಿದ್ದ ವಿವಾದಕ್ಕೆ ಬಿಬಿಎಂಪಿ ತೆರೆ ಎಳೆದಿದೆ.
ಆ ಜಾಗಕ್ಕೆ ಸಂಬಂಧಿಸಿದ ಖಾತಾ ಮಾಡಿಕೊಡುವಂತೆ ಕೋರಿ ಸಲ್ಲಿಸಿದ್ದ ವಕ್ಫ್ ಮಂಡಳಿಯ ಅರ್ಜಿಯನ್ನು ವಜಾಗೊಳಿಸಿರುವ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್, ಮೈದಾನವು ಕಂದಾಯ ಇಲಾಖೆಗೆ ಸೇರಿದೆ ಎಂದು ಶನಿವಾರ ಆದೇಶ ಹೊರಡಿಸಿದ್ದಾರೆ. ವಕ್ಫ್ ಮಂಡಳಿಯು ಈ ಮೈದಾನದ ಮೇಲೆ ಹಕ್ಕು ಸ್ಥಾಪಿಸಬೇಕಾದ್ದಲ್ಲಿ ಕಂದಾಯ ಇಲಾಖೆಯೊಂದಿಗೆ ವ್ಯವಹರಿಸಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಈ ಮೈದಾನದ 2.5 ಎಕ್ರೆ ಆಸ್ತಿ ಯನ್ನು ವಕ್ಫ್ ಮಂಡಳಿ ಹೆಸರಿಗೆ ಖಾತಾ ಮಾಡಿಕೊಡುವಂತೆ ಜೂ.21ರಂದು ಪಾಲಿಕೆಗೆ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿ ತಿರಸ್ಕರಿಸಲು ಕಾರಣಗಳು
ಈ ಮೈದಾನವು ಬೆಂಗಳೂರು ದಕ್ಷಿಣ ತಾಲೂಕು ಗುಟ್ಟಹಳ್ಳಿಯ ಸರ್ವೆ ನಂಬರ್ 40ರ ಭಾಗಶಃ ಆಸ್ತಿಯಾಗಿದೆ. ಚಾಮರಾಜಪೇಟೆ ಬಡಾವಣೆಯಾದಾಗ ಇದು ನಗರ ವ್ಯಾಪ್ತಿಗೆ ಸೇರಿದೆ ಮತ್ತು ಚೆಕ್ಕುಬಂದಿಯ ಬಗ್ಗೆ ವಿವಾದಗಳಿಲ್ಲ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಮೈದಾನದಲ್ಲಿ ಪ್ರಾರ್ಥನೆ ಕುರಿತು ಮಾತ್ರ ವಾದಗಳು ನಡೆದಿವೆ. 1964ರಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಮುಸ್ಲಿಮರು ಮೈದಾನದಲ್ಲಿ ಸಾಂದರ್ಭಿಕ ಸಾಮೂಹಿಕ ಪ್ರಾರ್ಥನೆ ಹಕ್ಕು ಮಾತ್ರ ಪಡೆದಿದ್ದಾರೆಯೇ ಹೊರತು ಮಾಲಕತ್ವವಲ್ಲ. ಮೈದಾನ ಕುರಿತು ಕೋರ್ಟ್ನಲ್ಲಿ ಮುಸ್ಲಿಮರು ಪ್ರಾರ್ಥನಾ ಹಕ್ಕು ಮಾತ್ರ ಮಂಡಿಸಿದ್ದಾರೆ. ಮಾಲಕತ್ವದ ಹಕ್ಕು ಮಂಡಿಸಿಲ್ಲ. ಸುಪ್ರೀಂ ತೀರ್ಪಿನ ಪ್ರಕಾರ ಮೈಸೂರು ಲ್ಯಾಂಡ್ ರೆವಿನ್ಯೂ ಕೋಡ್ 36ರ ಅನ್ವಯ ಈ ಮೈದಾನವು ಸರಕಾರದ ಸ್ವತ್ತು ಎಂದು ಪರಿಗಣಿಸಬಹುದು ಎಂದು ಹೇಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ