“ಚಂಬಲ್’ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ
Team Udayavani, Feb 20, 2019, 12:32 AM IST
ಬೆಂಗಳೂರು: ನೀನಾಸಂ ಸತೀಶ್ ನಟನೆಯ “ಚಂಬಲ್’ ಚಿತ್ರದ ಬಿಡುಗಡೆ ಮತ್ತು ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಮೃತ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಹೆತ್ತವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ನಟ ನೀನಾಸಂ ಸತೀಶ್ ಮತ್ತು ಚಿತ್ರ ತಂಡ, ಕೇಂದ್ರದ ಪ್ರಸಾರ ಮತ್ತು ಮಾಹಿತಿ ಸಚಿವಾಲಯ, ರಾಜ್ಯ ಗೃಹ ಇಲಾಖೆ, ಸೆನ್ಸಾರ್ ಮಂಡಳಿ ಪ್ರಾದೇಶಿಕ ಅಧಿಕಾರಿ ಸಹಿತ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.
“ಚಂಬಲ್’ ಚಿತ್ರ ಫೆ.23ರಂದು ರಾಜ್ಯ ಹಾಗೂ ಹೊರ ರಾಜ್ಯಗಳ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗೊಳ್ಳಲಿದೆ. ಚಿತ್ರದ “ಟ್ರೇಲರ್’ ಗಮನಿಸಿದರೆ ಅದು ತಮ್ಮ ಮಗನ ಜೀವನ ಆಧರಿಸಿ ಸಿನಿಮಾ ನಿರ್ಮಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತದೆ. ಈ ಚಿತ್ರದಲ್ಲಿ ತಮ್ಮ ಮಗನ ವ್ಯಕ್ತಿತ್ವ ಹಾಗೂ ಚಾರಿತ್ರ್ಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ತೋರಿಸಲಾಗಿದೆ. ಒಂದು ವೇಳೆ ಚಿತ್ರ ಬಿಡುಗಡೆಯಾಗಿ. ಪ್ರದರ್ಶನ ಕಂಡರೆ ಡಿ.ಕೆ. ರವಿ ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಹಾಗಾಗಿ ಚಿತ್ರದ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ರವಿ ಪೋಷಕರು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್