8 ಮಂದಿ ಸಾಧಕರಿಗೆ “ಚಂದನ’ ಪ್ರಶಸ್ತಿ
Team Udayavani, Nov 9, 2019, 3:03 AM IST
ಬೆಂಗಳೂರು: ಬೆಂಗಳೂರು ದೂರದರ್ಶನ ಕೇಂದ್ರದಿಂದ ನೀಡುವ “ಚಂದನ ಪ್ರಶಸ್ತಿ’ಗೆ ಡಾ.ಜಿ.ಎನ್.ನಾಗಮಣಿ ಶ್ರೀನಾಥ್, ಎಂ.ಎಸ್.ನರಸಿಂಹಮೂರ್ತಿ ಸೇರಿ ಎಂಟು ಜನ ಸಾಧಕರು ಆಯ್ಕೆಯಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ.ಜಿ.ಎನ್.ನಾಗಮಣಿ ಶ್ರೀನಾಥ್, ನೃತ್ಯ ಕಲಾವಿದೆ ಶ್ರೀದೇವಿ ಉನ್ನಿ, ಕೃಷಿ ಸಾಧಕ ಹನುಮಂತಪ್ಪ ಭೀಮಪ್ಪ ಮಡೂರ್, ರಂಗ ಸಾಧಕ ಸಾಂಬಾಶಿವ ದಳವಾಯಿ, ಸಾಹಿತ್ಯ ಸಾಧಕ ಶಶಿಕಲಾ ವಸ್ತ್ರದ ಸಿಂದಗಿ, ಕಿರುತೆರೆ ನಿರ್ದೇಶಕ ಎಂ.ಎಸ್.ನರಸಿಂಹಮೂರ್ತಿ, ಕ್ರೀಡಾ ಸಾಧಕಿ ಎಸ್.ಸಬಿಯಾ, ಶಿಕ್ಷಣ ಸಾಧಕ ಶಿವಪ್ಪ ಕುಬೇರ, ಜಾನಪದ ಕ್ಷೇತ್ರದಲ್ಲಿ ಹೆಸರು ಮಾಡಿರುವ ಪಾರವ್ವ ಲಚ್ಚಪ್ಪ ಲಮಾಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾ ನಿರ್ದೇಶಕ ರಾಜ್ಕುಮಾರ್, ಬೆಂಗಳೂರು ದೂರದರ್ಶನ ಕೇಂದ್ರದಿಂದ ನ.9ರಂದು ನಗರದಲ್ಲಿ “ಚಂದನ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರಂಭ ನಡೆಯಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗೌರವಿಸಲಾಗುವುದು ಎಂದರು. ಅತಿಥಿಗಳಾಗಿ ರಾಜ್ಯಪಾಲ ವಜುಭಾಯ್ ವಾಲಾ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಲೋಕಾಯುಕ್ತ ಪಿ.ವಿಶ್ವನಾಥ್ ಶೆಟ್ಟಿ, ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ