ಚಂದ್ರಶೇಖರ್ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು!
Team Udayavani, Jul 6, 2022, 10:45 AM IST
ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಬರ್ಬರವಾಗಿ ಕೊಲೈಗೈದ ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮಂಗಳವಾರ ರಾತ್ರಿಯಿಂದ ಬೆಳಗಿನ ಜಾವದವರೆಗೆ ತೀವ್ರ ವಿಚಾರಣೆ ನಡೆಸಿದ್ದಾರೆ. ಕೊಲೆಗೆ ಕಾರಣ ಏನು? ಇದರಲ್ಲಿ ಇನ್ನೂ ಯಾರ ಕೈವಾಡವಿದೆ ಎಂದು ಕೂಲಂಕಷ ತನಿಖೆ ನಡೆಸಿದ್ದಾರೆ.
ಮಹಾನಗರ ಪೊಲೀಸ್ ಆಯುಕ್ತ ಲಾಭೂ ರಾಮ್ ಅವರು ಸ್ವತಃ ಇಬ್ಬರು ಹಂತಕರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದು, ಇಬ್ಬರೂ ಹಣಕಾಸಿನ ವ್ಯವಾಹಾರಕ್ಕೆ ಸಂಬಂಧಿಸಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇದರ ನಡುವೆ ಮಂಜುನಾಥ, ಗುರೂಜಿ ತನ್ನ ಜಾತಿ ನಿಂದನೆ ಮಾಡಿದ್ದರು. ಈ ಕಾಋಣದಿಂದಾಗಿ ಹತ್ಯೆ ನಡೆಸಿದ್ದೇನೆ ಎಂದಿದ್ದಾನೆ. ಇದಕ್ಕಿಂತ ಹೆಚ್ಚಿನ ವಿಷಯಗಳನ್ನು ಪೊಲೀಸರ ಎದುರು ಹಂತಕರು ಬಾಯಿಬಿಡುತ್ತಿಲ್ಲ ಎನ್ನಲಾಗಿದೆ. ವಿಚಾರಣೆ ವೇಳೆ ಹಂತಕರ ಜತೆಗೆ ಗುರುತಿಸಿಕೊಂಡಿದ್ದ ಕೆಲವರನ್ನು ಪೊಲೀಸರು ಕರೆಸಿ ವಿಚಾರಣೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಚಂದ್ರಶೇಖರ ಗುರೂಜಿ ಹತ್ಯೆ: ಐದು ದಿನ ಹಿಂದೆಯೇ ಫೇಸ್ಬುಕ್ನಲ್ಲಿ ಸುಳಿವು ಕೊಟ್ಟಿದ್ದ ಆರೋಪಿ?
ಪಂಚನಾಮೆ ವೇಳೆ ಹಂತಕರು ಗುರೂಜಿಗೆ 45 ಬಾರಿ ಇರಿದಿದ್ದಾರೆ ಎಂದು ಗೊತ್ತಾಗಿದೆ. ಚಂದ್ರಶೇಖರ್ ಗುರೂಜಿಯ ಮೃತದೇಹವನ್ನು ಕಿಮ್ಸ್ ನ ಶವಾಗಾರದಲ್ಲಿ ಇರಿಸಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಪಾರ್ಥೀವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ