Coffee, ಟೀ, ರಬ್ಬರ್‌ ಕಂಪನಿಗಳಿಂದ ಮೋಸ: ಸಚಿವ ಈಶ್ವರ್‌ ಖಂಡ್ರೆ

5 ಸಾವಿರ ಎಕರೆ ಅರಣ್ಯ ಭೂಮಿಯಿಂದ ಸರ್ಕಾರಕ್ಕೆ 2000 ಕೋಟಿ ರೂಪಾಯಿ ಬಾಕಿ

Team Udayavani, Jan 10, 2024, 6:45 AM IST

Coffee, ಟೀ, ರಬ್ಬರ್‌ ಕಂಪನಿಗಳಿಂದ ಮೋಸ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕಾಫಿ, ಟೀ, ರಬ್ಬರ್‌ ಬೆಳೆಯುತ್ತಿದ್ದ ರಾಜ್ಯದ ಸುಮಾರು 5,500 ಎಕರೆ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದು ಹಲವು ವರ್ಷಗಳು ಕಳೆದಿದ್ದು, ಇದುವರೆಗೆ ಅಸಲು ಮತ್ತು ಬಡ್ಡಿ ಸೇರಿ 2 ಸಾವಿರ ಕೋಟಿ ರೂ. ಸರ್ಕಾರಕ್ಕೆ ಬರಬೇಕಿದೆ. ಅಲ್ಲದೆ, ಇದುವರೆಗೆ ಈ ಭೂಮಿಯನ್ನೂ ಹಿಂದಿರುಗಿಸಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ಮಂಗಳವಾರ ವಿಕಾಸಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜತೆಗೆ ನಡೆದ ಸಭೆ ವೇಳೆ ಈ ವಿಷಯ ಬೆಳಕಿಗೆ ಬಂದಿದ್ದು, ಸಭೆ ಬಳಿಕ ಸಚಿವ ಈಶ್ವರ್‌ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ಸ್ವಾತಂತ್ರ್ಯಪೂರ್ವದಿಂದ ಕೊಡಗು, ಚಾಮರಾಜನಗರ ಸೇರಿ ವಿವಿಧೆಡೆ ಅರಣ್ಯ ಭೂಮಿಯನ್ನು ಕಾಫಿ, ಟೀ, ರಬ್ಬರ್‌ ಬೆಳೆಯುವ ಕಂಪನಿಗಳಿಗೆ ಪ್ರತಿ ಎಕರೆಗೆ 2 ರಿಂದ 7 ರೂ.ಗಳಂತೆ 99 ವರ್ಷಗಳ ದೀರ್ಘಾವಧಿ ಗುತ್ತಿಗೆಗೆ ಕೊಡಲಾಗಿತ್ತು. 1997ರಲ್ಲಿ ಕರ್ನಾಟಕ ಅರಣ್ಯ ಕಾಯ್ದೆ ಜಾರಿಗೆ ಬಂದ ಬಳಿಕ ಪ್ರತಿ ಹೆಕ್ಟೇರ್‌ಗೆ 5 ಸಾವಿರ ರೂ. ಗುತ್ತಿಗೆ ಮೊತ್ತವನ್ನು ನಿಗದಿಪಡಿಸಿತ್ತು. ಗುತ್ತಿಗೆ ಅವಧಿ ವಿಸ್ತರಿಸಿರಲಿಲ್ಲ. ಕೊಡಗು ಜಿಲ್ಲೆಯ ಪೋರ್ಟ್‌ ಲ್ಯಾಂಡ್‌ ರಬ್ಬರ್‌ ಎಸ್ಟೇಟ್‌ನ ಗುತ್ತಿಗೆ ಅವಧಿಯು 2022ರಲ್ಲಿ ಅಂತ್ಯಗೊಂಡಿದ್ದು, ಉಳಿದ ಬಹುತೇಕ ಕಂಪನಿಗಳ ಗುತ್ತಿಗೆ ಅವಧಿಯು 2015ರಲ್ಲೇ ಮುಗಿದಿದೆ. ಕೊಡಗು ಜಿಲ್ಲೆಯೊಂದರಲ್ಲೇ 1601 ಕೋಟಿ ರೂ. ಬರಬೇಕಿದೆ ಎಂದರು.

ಅರಣ್ಯ ಭೂಮಿ ಮೇಲೆ ಸಾಲ: ಅವಧಿ ಮುಗಿದರೂ ಭೂಮಿ ಬಳಕೆ ಮಾಡುತ್ತಿದ್ದ ಕಂಪನಿಗಳು ಗುತ್ತಿಗೆ ಮೊತ್ತ ಕೂಡ ಪಾವತಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಅರಣ್ಯ ಇಲಾಖೆ ಕೊಟ್ಟ ನೋಟಿಸ್‌ ಇಟ್ಟುಕೊಂಡು ವಿವಿಧ ನ್ಯಾಯಾಲಯಗಳಲ್ಲಿ ದಾವೆ ಹೂಡಿವೆ. ಕೆಲ ಕಂಪನಿಗಳು 99 ವರ್ಷದ ಗುತ್ತಿಗೆ ಅವಧಿಯನ್ನು 999 ವರ್ಷ ಎಂದು ತಿದ್ದುಪಡಿ ಮಾಡಿಕೊಂಡಿವೆ, ಕೆಲ ಕಂಪನಿಗಳು ಗುತ್ತಿಗೆಗೆ ನೀಡಿದ್ದ ಅರಣ್ಯ ಭೂಮಿಯನ್ನು ಇತರರಿಗೆ ಬಾಡಿಗೆ, ಗುತ್ತಿಗೆಗೆ ನೀಡಿರುವುದಲ್ಲದೆ, ಪರಭಾರೆ ಮಾಡಿಕೊಳ್ಳಲೂ ಪ್ರಯತ್ನಿಸಿವೆ. ಥಾಮ್ಸನ್‌ ರಬ್ಬರ್‌ ಕಂಪನಿಯು ಅರಣ್ಯ ಭೂಮಿಯನ್ನು ಸಾಗುವಳಿ ಜಮೀನು ಎಂದು ದಾಖಲೆ ಸೃಷ್ಟಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಸಾಲ ಪಡೆದಿದೆ. ಆದರೆ ಸಾಲವನ್ನೂ ತೀರಿಸಿಲ್ಲ. ಹೀಗಾಗಿ ಆ ಜಮೀನನ್ನು ಬ್ಯಾಂಕಿನವರು ಹರಾಜು ಹಾಕಿದ್ದಾರೆ ಎಂದರು.

ಕಾನೂನು ಹೋರಾಟಕ್ಕೆ ವಿಶೇಷ ಕೋಶ: ಇಂತಹ ಕಂಪನಿಗಳು ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಶೇಷ ಕಾನೂನು ಕೋಶ ರಚಿಸಲಾಗುತ್ತದೆ. ಈ ಬಗ್ಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ಪಿಸಿಸಿಎಫ್ ದರ್ಜೆಯ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ. ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಮುಂದಿನ 6 ತಿಂಗಳಿಂದ 1 ವರ್ಷದೊಳಗಾಗಿ ಅಷ್ಟೂ ಮೊತ್ತವನ್ನು ವಸೂಲಿ ಮಾಡಿ, ಗುತ್ತಿಗೆ ಮುಗಿದ ಭೂಮಿಯನ್ನು ಇಲಾಖೆಯ ವಶಕ್ಕೆ ಪಡೆಯುವುದಾಗಿ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.