ದಾವಣಗೆರೆ: ಸಲಿಂಗ ಕಾಮಿ ಆ್ಯಪ್ ಮೂಲಕ ಅಮಾಯಕರ ವಂಚನೆ
ಕೆಆರ್ ಎಸ್ ಪಕ್ಷದ ಯುವ ಮುಖಂಡ ಸೇರಿ ಹಲವರ ಬಂಧನ
Team Udayavani, Aug 20, 2022, 7:53 PM IST
ದಾವಣಗೆರೆ: ಗ್ರೇಂಡರ್ ಗೇ(ಸಲಿಂಗ ಕಾಮಿ) ಆ್ಯಪ್ ಮೂಲಕ ಅಮಾಯಕರನ್ನು ವಂಚಿಸಿ, ದರೋಡೆ ಮಾಡುತ್ತಿದ್ದ ಐವರು ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ್ದ ಕೆಆರ್ ಎಸ್ ಪಕ್ಷದ ಯುವ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ದರೋಡೆ ಮಾಡಿದ್ದ ಗ್ಯಾಂಗ್ನ ಸದಸ್ಯ ಶ್ರೀನಿವಾಸ್ ಮತ್ತು ಒಬ್ಬ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಹಾಗೂ ದರೋಡೆ ಗ್ಯಾಂಗಿನ ಸದಸ್ಯರಿಗೆ ಆರೋಪಿತರೆಂದು ಗೊತ್ತಿದ್ದು ಆಶ್ರಯ ನೀಡಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಕೆಆರ್ ಎಸ್ ಪಕ್ಷದ ದಾವಣಗೆರೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಾಲತೇಶ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಗ್ರೇಂಡರ್ ಗೇ (ಸಲಿಂಗ ಕಾಮಿ) ಆಪ್ ಮೂಲಕ ವ್ಯಕ್ತಿಯೊಬ್ಬನನ್ನು ಪರಿಚಯಿಸಿಕೊಂಡು ಕುಂದುವಾಡದ ನಿರ್ಜನ ಪ್ರದೇಶಕ್ಕೆ ಕರೆಯಿಸಿಕೊಂಡು 5-6 ಜನ ಸೇರಿಕೊಂಡು ಹಲ್ಲೆ ಮಾಡಿ ಮೊಬೈಲ್, 25 ಗ್ರಾಂ ತೂಕದ ಬಂಗಾರದ ಸರ ಮತ್ತು 2 ಸಾವಿರ ಹಣ ಕಿತ್ತುಕೊಂಡಿದ್ದರು.ಅಲ್ಲದೆ ಎಟಿಎಂ ಕಾರ್ಡ್ ಮತ್ತು ಪಾಸ್ ವರ್ಡ್ ಪಡೆದುಕೊಂಡು 16 ಸಾವಿರ ರೂಪಾಯಿ ವಿತ್ ಡ್ರಾ ಮಾಡಿಕೊಂಡಿದ್ದರು ಎಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದರೋಡೆ ಮಾಡಿದ್ದ ಮೊಬೈಲ್, ದರೋಡೆ ಮಾಡಲು ಬಳಸಿದ್ದ 2 ಮೊಬೈಲ್, ಆಟೋ ರಿಕ್ಷಾ ವಶಕ್ಕೆ ಪಡೆದುಕೊಳ್ಳ ಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿತರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.