ಲಾಕ್ ಡೌನ್ 4.0 ಕುರಿತು ಚರ್ಚಿಸಲು ನಾಳೆ ಮುಖ್ಯಮಂತ್ರಿ ಬಿ.ಎಸ್.ವೈ. ಮಹತ್ವದ ಸಭೆ
Team Udayavani, May 17, 2020, 11:31 PM IST
ಬೆಂಗಳೂರು: ಕೋವಿಡ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಮೇ 31ರವರೆಗೆ ವಿಸ್ತರಣೆಗೊಂಡಿದೆ.
ಈ ಸಂಬಂಧವಾಗಿ ಇಂದು ಆದೇಶವನ್ನು ಪ್ರಕಟಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತತ್ಸಂಬಂದಿ ಸೂಚನೆಗಳನ್ನೂ ರವಾನಿಸಿದೆ.
ಮತ್ತು ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಮಾರ್ಗಸೂಚಿಗಳನ್ನೂ ಸಹ ಕೇಂದ್ರ ಈಗಾಗಲೇ ಪ್ರಕಟಿಸಿದೆ.
ಈ ಹಿನ್ನಲೆಯಲ್ಲಿ ಲಾಕ್ ಡೌನ್ 4.0 ರ ಕುರಿತು ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆಯೊಂದನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಮುಂದಿನ ಹಂತದ ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ