ಮೊದಲ ಅಧಿವೇಶನ ಪರೀಕ್ಷೆ ಗೆದ್ದ  ಮುಖ್ಯಮಂತ್ರಿ ಬೊಮ್ಮಾಯಿ


Team Udayavani, Sep 25, 2021, 6:50 AM IST

ಮೊದಲ ಅಧಿವೇಶನ ಪರೀಕ್ಷೆ ಗೆದ್ದ  ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಅನಿರೀಕ್ಷಿತ ವಾಗಿ ದೊರೆತ ನಾಯಕತ್ವವನ್ನು ಸಮರ್ಥವಾಗಿ ನಿಭಾಯಿಸಿ, ಹತ್ತು ದಿನಗಳ ಮೊದಲ ಅಧಿವೇಶನವನ್ನು ಸದ್ದುಗದ್ದಲವಿಲ್ಲದೆ ನಡೆಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ.

ಬೊಮ್ಮಾಯಿ ತಮ್ಮ ಸರಳ ನಡೆ ಹಾಗೂ ಚುರುಕಿನ ಆಡಳಿತದಿಂದ ಜನರ ವಿಶ್ವಾಸ ಗಳಿಸುತ್ತಿದ್ದು,  ಅಧಿವೇಶನ ದಲ್ಲೂ ವಿಪಕ್ಷಗಳನ್ನು ಯಶಸ್ವಿಯಾಗಿ ಎದುರಿಸಿ, ನಾಯಕತ್ವದ ಬಗ್ಗೆ ಬಿಜೆಪಿ ನಾಯಕರಿಗಿದ್ದ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.

ದಾಖಲೆಗಳ ಮೂಲಕವೇ ಉತ್ತರ:

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ವಿಚಾರದಲ್ಲಿ  ರಾಜ್ಯ ಹಾಗೂ ಕೇಂದ್ರ ಸರಕಾರಗಳ ವಿರುದ್ಧ ಮಾಡಿದ ಆರೋಪಗಳಿಗೆ  ದಾಖಲೆಗಳ ಸಮೇತ ತಿರುಗೇಟು ನೀಡಿದ್ದಾರೆ. ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ  ಆಗಿರುವ ಬೆಲೆ ಏರಿಕೆ, ಹಣದುಬ್ಬರ ಹೆಚ್ಚಳ, ಅಂತಾರಾಷ್ಟ್ರೀಯ ಮಟ್ಟದ ತೈಲ ಬೆಲೆ ಏರಿಕೆ, ಆಗಿನ ಸಂದರ್ಭದಲ್ಲಿ ಸರಕಾರಗಳು ತೆಗೆದುಕೊಂಡ ನಿಲುವುಗಳನ್ನು ಉಲ್ಲೇಖೀಸಿ ವಿಪಕ್ಷಗಳ ಆಕ್ರೋಶದ ತೀವ್ರತೆಯನ್ನು ಕಡಿಮಾ ಮಾಡುವಲ್ಲಿ ಸಫ‌ಲರಾಗಿದ್ದಾರೆ.

ಕಾವ್ಯಾತ್ಮಕ ಉತ್ತರ:

ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಲೆ ಏರಿಕೆ ವಿಷಯದ ಚರ್ಚೆಯಲ್ಲಿ ಕುಮಾರವ್ಯಾಸನ  ಕಾವ್ಯದ ಮೂಲಕ ನಾಯಕನಾದವನು ಹೇಗಿರಬೇಕು ಎಂದು ತಿಳಿಸಿದ್ದರು. ಅದೇ ಕುಮಾರ ವ್ಯಾಸನ ಕಾವ್ಯದ ಮೂಲಕವೇ ತಮ್ಮ ನಾಯಕತ್ವ ಹೇಗಿದೆ ಎನ್ನುವುದನ್ನು ಸಮರ್ಥಿಸಿಕೊಳ್ಳುವ ಮೂಲಕ  ವಿಪಕ್ಷ ನಾಯಕರಿಗೆ ತಕ್ಕ ಉತ್ತರ ಕೊಡಬಲ್ಲೆ ಎಂಬ ಸಂದೇಶ ರವಾನಿಸಿದರು.

ವಿಪಕ್ಷ ನಾಯಕರಿಗೆ ಮುಖ್ಯ ಮಂತ್ರಿ  ರಾಜಕೀಯವಾಗಿಯೂ ಸಮರ್ಥವಾಗಿಯೇ ಉತ್ತರ ನೀಡಿರು ವುದು  ಮೆಚ್ಚುಗೆಗೆ ಪಾತ್ರವಾಗಿದೆ.

ಸಚಿವರ ಬೆನ್ನಿಗೆ:

ಪ್ರಶ್ನೋತ್ತರ ಕಲಾಪ, ನಿಲುವಳಿ ಸೂಚನೆ ಮೇಲಿನ ಉತ್ತರ, ಮಸೂ ದೆಗಳ ಮೇಲಿನ ಚರ್ಚೆ ಸಂದರ್ಭ ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಚಿವರು  ಉತ್ತರಿಸಲು ಪರದಾಡ ಬೇಕಾಗಿ ಬಂದಾಗ ಅವರ ಸಹಾಯಕ್ಕೆ ಬಂದಿರುವುದೂ ಗಮನ ಸೆಳೆದಿದೆ.

ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ಮಸೂದೆಯನ್ನು ಮುಜರಾಯಿ ಸಚಿವರ ಬದಲಾಗಿ ತಾನೇ ಮಂಡಿಸಿ,   ಅತ್ಯಂತ ಸೂಕ್ಷ್ಮ ಮಸೂದೆಗೂ   ಗೊಂದಲವಿಲ್ಲದೆ ಅಂಗೀಕಾರ ಪಡೆದು ಕೊಳ್ಳುವಲ್ಲಿ   ಜಾಣ್ಮೆ ತೋರಿದ್ದಾರೆ.

ವಿಪಕ್ಷಗಳ ಸಹಕಾರವೇ ಶ್ರೀರಕ್ಷೆ :

ನಾಯಕತ್ವ ಬದಲಾವಣೆ ಬಳಿಕ ಕಂಡುಬಂದಿದ್ದ ಬಿಜೆಪಿ  ಶಾಸಕರ ಅಸಮಾ ಧಾನ  ತಣ್ಣಗಾದಂತೆ ಕಾಣಿಸುತ್ತಿದೆ.  ನಿರೀಕ್ಷಿತ  ಪ್ರಮಾಣದಲ್ಲಿ ಅನುದಾನ ದೊರೆಯದಿದ್ದರೂ, ಹದಿನೈದು ದಿನಗಳಲ್ಲಿ ಎರಡು ಶಾಸಕಾಂಗ ಸಭೆಗಳನ್ನು ಕರೆದಿದ್ದರೂ ನಾಯಕತ್ವದ ವಿರುದ್ಧ ಬಹಿರಂಗವಾಗಿ ಯಾರೂ ಮಾತಾಡಿಲ್ಲ. ಇದು ಬೊಮ್ಮಾಯಿಗೆ ಹೆಚ್ಚು ಅನುಕೂಲವಾಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕರ ಪರೋಕ್ಷ ಸಹಕಾರವೂ  ಸಿಕ್ಕಿತ್ತು.

ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್‌ ಮೂಲದವರಾಗಿರದೆ ಜನತಾ ಪರಿವಾರದ ಮೂಲಕ ಸಮಾಜವಾದಿ ಚಿಂತನೆಯ ಹಿನ್ನೆಲೆಯಿಂದ ಬಂದವರಾಗಿರುವುದರಿಂದ ಹಾಗೂ ಮಾಜಿ ಸಿಎಂ ಎಸ್‌.ಆರ್‌. ಬೊಮ್ಮಾಯಿ ಅವರ ಪುತ್ರರೆಂಬ ಕಾರಣಕ್ಕೆ  ಸಿದ್ದರಾಮಯ್ಯ ಕೂಡ  ಸುಗಮ ಕಲಾಪ ನಡೆಯಲು ಸಹಕಾರ ನೀಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.  ಸಿದ್ದರಾಮಯ್ಯ ವಿಷಯಾಧಾರಿತ ಆರೋಪ ಮಾಡಿದರೂ, ಸುಗಮ ಕಲಾಪಕ್ಕೆ ಅಡ್ಡಿಯಾಗದಂತೆ ಎಲ್ಲ ಕಾರ್ಯಕಲಾಪಗಳಲ್ಲಿ ಭಾಗವಹಿಸುವ ಮೂಲಕ  ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಹಕಾರ ತೋರಿಸಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.