
ಬಡವರ ಕನಸು ನನಸು ಬಿಜೆಪಿ ಗುರಿ: ಸಿಎಂ ಬೊಮ್ಮಾಯಿ
ನಮ್ಮ ಅವಧಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಕೆ
Team Udayavani, Mar 21, 2023, 6:20 AM IST

ಬೆಂಗಳೂರು: ಬಡವರ ಕನಸನ್ನು ನನಸು ಮಾಡುವುದೇ ಬಿಜೆಪಿ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಸವನಗುಡಿಯ ನ್ಯಾಷನಲ್ ಕಾಲೇಜು ಆಟದ ಮೈದಾನದಲ್ಲಿ ಕಂದಾಯ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 5 ಸಾವಿರ ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.
ಸುಮಾರು 1 ಲಕ್ಷ 54 ಸಾವಿರ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. 1.5 ಲಕ್ಷಕ್ಕೂ ಅಧಿಕ ಲಮಾಣಿ ತಾಂಡ, ಕುರುಬರ ಹಟ್ಟಿ, ಗೊಲ್ಲರ ಹಟ್ಟಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆೆ. ಕೊಳಚೆ ಅಭಿವೃದ್ಧಿ ನಿಗಮದ ಅಡಿಯಲ್ಲಿ 1.72 ಲಕ್ಷ ಮನೆಗಳನ್ನು ಸರ್ಕಾರ ನಿರ್ಮಿಸಿದೆ. ಕಾಫಿ ಬೆಳೆಗಾರರಿಗೆ ಭೂಮಿ ಗುತ್ತಿಗೆ ಕೊಡುವ ಕೆಲಸ ನಡೆದಿದೆ ಎಂದು ತಿಳಿಸಿದರು.
40 ಲಕ್ಷ ಮನೆಗಳಿಗೆ ಕುಡಿಯುವ ನೀರು:
ಕುಡಿಯುವ ನೀರು ನೀಡುವಿಕೆ ವಿಚಾರದಲ್ಲಿ ಜನ ಮೆಚ್ಚುವ ಕೆಲಸ ಮಾಡಲಾಗಿದೆ. 72 ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಕೊಟ್ಟಿದ್ದರು. ಆದರೆ, ಬಿಜೆಪಿ ಸರ್ಕಾರದ 3 ವರ್ಷದ ಆಡಳಿತದಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಕಲ್ಪಿಸಲಾಗಿದೆ. ಬಡವರಿಗೆ 12 ಲಕ್ಷ ಶೌಚಾಲಯ ನಿರ್ಮಿಸಿಕೊಡಲಾಗಿದೆ ಎಂದರು.
ಈ ಹಿಂದೆ ಅಧಿಕಾರ ನಡೆಸಿದವರು ಏಕೆ ಈ ಕೆಲಸ ಮಾಡಲಿಲ್ಲ ಎಂಬ ಪ್ರಶ್ನೆಗೆ ಈಗ ಉತ್ತರ ದೊರಕುತ್ತಿದೆ. ಅವರಿಗೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ. ಅಧಿಕಾರದ ದಾಹದಲ್ಲೇ ಸಮಯ ಕಳೆದರು. ಆಡಳಿತ ವ್ಯವಸ್ಥೆಯಲ್ಲಿ ಎರಡು ರೀತಿಯ ರಾಜಕಾರಣವಿದೆ. ಒಂದು ಅಧಿಕಾರದ ರಾಜಕಾರಣ, ಮತ್ತೂಂದು ಜನರ ರಾಜಕಾರಣ. ನಾವು ಜನರ ರಾಜಕಾರಣದಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೃಷ್ಣಪ್ಪ, ಶಾಸಕ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಸತೀಶ್ ರೆಡ್ಡಿ ಇತರರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್

Supreme Court ಆದೇಶ ಪಾಲನೆಗೆ ನಿರ್ಣಯ:ಸೆ. 26ರ ವರೆಗೆ ನೀರು ಹರಿಸಲು ಸಚಿವ ಸಂಪುಟ ನಿರ್ಧಾರ

Karnataka ಸೆ. 30ರ ವರೆಗೆ ಸಬ್ರಿಜಿಸ್ಟ್ರಾರ್ ಕಚೇರಿ ಕರ್ತವ್ಯದ ಸಮಯ ವಿಸ್ತರಣೆ
MUST WATCH
ಹೊಸ ಸೇರ್ಪಡೆ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ