“ನಮ್ಮ ಶಾಲೆ ನಮ್ಮ ಜವಾಬ್ದಾರಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
Team Udayavani, Mar 6, 2024, 12:05 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ “ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.
ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆಯ ಉದ್ದೇಶ ಇದರದ್ದು.ಈ ವೇಳೆ ಅವರು ತಾವು ಓದಿದ, ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರಕಾರಿ ಶಾಲೆಯ ಮಕ್ಕಳೊಡನೆ ಸಂವಾದ ನಡೆಸಿದರು. ಹಾಗೆಯೇ ತಾವು ಓದಿದ ಶಾಲೆಗಳಿಗೆ 10 ಲಕ್ಷ ರೂ. ದೇಣಿಗೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, 48 ಸಾವಿರ ಸರಕಾರಿ ಶಾಲೆಗಳಲ್ಲಿ 14 ಸಾವಿರ ವಾಟ್ಸ್ ಆ್ಯಪ್ ಗುಂಪುಗಳಾಗಿವೆ. ಸರಕಾರಿ ಶಾಲೆಗಳ ಅಭಿವೃದ್ಧಿ ಕುರಿತು ದೊಡ್ಡ ಗುರಿಯನ್ನು ಹೊಂದಿದ್ದೇವೆ. 44 ಸಾವಿರ ಕೋಟಿ ರೂ.ಗಳನ್ನು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ. ಸಿಎಸ್ಆರ್ನಿಂದಲೂ ಇತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಏನಿದು ಯೋಜನೆ?
– ಹಳೆಯ ವಿದ್ಯಾರ್ಥಿಗಳು ತಾವು ಓದಿದ ಶಾಲೆಗಳಿಗೆ ಕೊಡುಗೆ ನೀಡುವುದೇ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಯೋಜನೆ.
-ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ರಚಿಸಿ, ಆ ಶಾಲೆಗಳನ್ನು ಶೈಕ್ಷಣಿಕ ಮತ್ತು ಭೌತಿಕವಾಗಿ ಬಲವರ್ಧನೆಗೊಳಿಸಲಾಗುತ್ತದೆ.
– ಶಾಲೆಗೆ ಅಗತ್ಯವಿರುವ ಗ್ರಂಥಾಲಯ, ಕ್ರೀಡಾಲಯ, ಪ್ರಯೋಗಾಲಯ,
ಸ್ಮಾರ್ಟ್ ಕ್ಲಾಸ್, ಇ ಕಲಿಕಾ ಕೇಂದ್ರ, ಪಾಠೊಪಕರಣ, ಪೀಠೊಪಕರಣ ಮುಂತಾದವುಗಳಿಗೆ ಹಳೆಯ ವಿದ್ಯಾರ್ಥಿಗಳ ನೆರವು ಪಡೆಯಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ