ಚಿಕ್ಕಮಗಳೂರು:ಕಡವೆ ಬೇಟೆ ಆರೋಪಿಗಳಿಗೆ ಸಚಿವದ್ವಯರ ರಕ್ಷಣೆ ?
Team Udayavani, Jan 7, 2017, 11:43 AM IST
ಚಿಕ್ಕಮಗಳೂರು: ನೂತನ ವರ್ಷಾಚರಣೆ ವೇಳೆ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪ ನೆತ್ತಿಚೌಕ ಅರಣ್ಯ ಪ್ರದೇಶದಲ್ಲಿ ಎರಡು ಕಡವೆ ಬೇಟೆಯಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೆಲ ಆರೋಪಿಗಳು ಗುರುವಾರ ರಾತ್ರಿ ಮತ್ತೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಇದೀಗ ಪ್ರಕರಣದ ಆರೋಪಿಗಳಲ್ಲಿ ಪ್ರಭಾವಿಗಳು ಸೇರಿಕೊಂಡಿದ್ದು, ಅವರಿಗೆ ಸಚಿವರಿಬ್ಬರು ರಕ್ಷಣೆ ನೀಡುತ್ತಿದ್ದಾರೆ ಎಂಬ ಅನುಮಾನ ಮೂಡಿದೆ.
ಆರೋಪಿಗಳ ಪೈಕಿ ಕೆಲವರು ನಿರೀಕ್ಷಣಾ ಜಾಮೀನು ಪಡೆಯುವ ಸಲುವಾಗಿ ನಗರದ ವಕೀಲರೊಬ್ಬರನ್ನು ಕಾಣಲು ಬಂದಿದ್ದ ಸುಳಿವಿನ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಖುದ್ದು ದಾಳಿ ನಡೆಸಿ, ಬಂಧಿಸಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ಕೂದಲೆಳೆ ಅಂತರದಲ್ಲಿ ಪರಾರಿಯಾಗಿದ್ದರು. ದಾಳಿ ವೇಳೆ ಇಬ್ಬರು ತಾವು ತಂದಿದ್ದ ವಾಹನದಿಂದ ಜಿಗಿದು ಪರಾರಿಯಾಗಿದ್ದು, ಅಪರಿಚಿತರಿಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯ ಇಂಜಿನಿಯರ್ಗಳು, ಬೆಂಗಳೂರು ರೈಫಲ್ ಕ್ಲಬ್ ಸದಸ್ಯರು ಎಂದು ತಿಳಿದು ಬಂದಿದ್ದು, ಪ್ರಮುಖ ಆರೋಪಿ ರಫೀಕ್ ಎಂಬಾತನಿಗೆ ಸಚಿವರು ರಕ್ಷಣೆ ನೀಡುತ್ತಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು