ಚಿನ್ನಸ್ವಾಮಿ ಬಾಂಬ್ ಸ್ಫೋಟ ಪ್ರಕರಣ; ಮೂವರಿಗೆ 7 ವರ್ಷ ಜೈಲುಶಿಕ್ಷೆ
Team Udayavani, Jul 9, 2018, 5:17 PM IST
ಬೆಂಗಳೂರು: ಸುಮಾರು ಆರು ವರ್ಷಗಳ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ ಬೆಂಗಳೂರಿನ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ 7 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2010ರ ಏಪ್ರಿಲ್ 10ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆರಂಭಕ್ಕೂ ಮುನ್ನ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದರು. ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಕಮಲ್ ಹಸನ್, ಗೌಹಾರ್ ಅಜೀಜ್ ಖೊಮೆನಿ, ಕಪಿಲ್ ಅಖ್ತರ್ ಗೆ 7 ವರ್ಷಗಳ ಜೈಲುಶಿಕ್ಷೆ ನೀಡಿದೆ.
ಪ್ರಕರಣದ ವಾದ, ಪ್ರತಿವಾದ ಆಲಿಸಿದ ನಂತರ ಎನ್ ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ತೀರ್ಪು ಪ್ರಕಟಿಸಿದರು.
ಸ್ಫೋಟ ಪ್ರಕರಣದ 5ನೇ ಆರೋಪಿಯಾಗಿರುವ ಗೌಹಾರ್ ಅಜೀಜ್ ಖೋಮೆನಿ, 12ನೇ ಆರೋಪಿ ಕಮಲ್ ಹಸನ್ ಅಲಿಯಾಸ್ ಕಮಲ್ ಹಾಗೂ 13ನೇ ಆರೋಪಿ ಮೊಹಮ್ಮದ್ ಕಫೀಲ್ ಅಖ್ತರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಉಳಿದ ಆರೋಪಿಗಳ ಬಗ್ಗೆ ತನಿಖೆ ನಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ