ಆಡಳಿತ ” ಕುಂಟಿತ”: ಪರಿವಾರದಿಂದ ಮುಂದಿನ ವಾರ ಚಿಂತನಾ ಬೈಠಕ್
Team Udayavani, Jun 17, 2022, 9:54 AM IST
ಬೆಂಗಳೂರು: ಚುನಾವಣಾ ವರ್ಷದಲ್ಲೂ ರಾಜ್ಯ ಸರಕಾರದ ಆಡಳಿತ ನಿರೀಕ್ಷಿತ ವೇಗದಲ್ಲಿ ನಡೆಯದೇ ಇರುವ ಬಗ್ಗೆ ಸಂಘ-ಪರಿವಾರದ ಮುಖಂಡರು ಅಸಮಾಧಾನಗೊಂಡಿದ್ದು, ಇದೇ ತಿಂಗಳು ಬೆಂಗಳೂರಿನಲ್ಲಿ ಮಹತ್ವದ ಚಿಂತನಾ ಬೈಠಕ್ ನಡೆಸಲು ತೀರ್ಮಾನಿಸಲಾಗಿದೆ.
ಜೂನ್ 21, 22 ರಂದು ಬೆಂಗಳೂರಿನ ಕೇಶವ ಕೃಪಾದಲ್ಲಿ ಚಿಂತನಾ ಬೈಠಕ್ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಸಂಪುಟದ ಆಯ್ದ ಸಚಿವರಿಗೆ ಮಾತ್ರ ಈ ಸಭೆಗೆ ಆಹ್ವಾನ ನೀಡಲಾಗಿದ್ದು, ಸರಕಾರದ ಆಡಳಿತ ವೈಖರಿ, ನೀತಿ- ನಿರೂಪಣಾ ವ್ಯವಸ್ಥೆಯ ಬಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಸಭೆಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಹಿರಿಯ ಸಚಿವರೊಬ್ಬರು ಭಾಗವಹಿಸುವ ನಿರೀಕ್ಷೆ ಇದೆ. ಜತೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಘ ಪರಿವಾರದ ಮುಖಂಡರಾದ ಮುಕುಂದ್, ರವಿಕುಮಾರ್, ತಿಪ್ಪೇಸ್ವಾಮಿ ಮೊದಲಾದವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ಭ್ರಷ್ಟರ ಬೇಟೆಗಿಳಿದ ಎಸಿಬಿ: ರಾಜ್ಯದ 80 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ
ಚುನಾವಣಾ ವರ್ಷದಲ್ಲೂ ಬಿಜೆಪಿ ಸರಕಾರದ ಆಡಳಿತ ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಸರಕಾರದ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಉತ್ತಮ ಅಭಿಪ್ರಾಯ ಮೂಡುತ್ತಿಲ್ಲ. ಸ್ಪಂದನಾಶೀಲತೆ ಸಮರ್ಪಕವಾಗಿ ಇಲ್ಲ. ತಳಹಂತದ ಭ್ರಷ್ಟಾಚಾರ ಹಾಗೂ ದೋಷಪೂರಿತ ಕಾಮಗಾರಿಗಳು ಜನರಲ್ಲಿ ಬೇಸರ ಮೂಡಿಸುತ್ತಿವೆ. ಇದೆಲ್ಲದಕ್ಕೂ ಸರಕಾರ ಪರಿಹಾರ ಕಲ್ಪಿಸದೇ ಇದ್ದರೆ ಚುನಾವಣಾ ವರ್ಷದಲ್ಲಿ ಸಮಸ್ಯೆ ಸೃಷ್ಟಿಯಾಗುತ್ತದೆ ಎಂಬ ಮಾಹಿತಿಯನ್ನು ಸಂಘ – ಪರಿವಾರದ ಮುಖಂಡರು ಸಂಗ್ರಹಿಸಿದ್ದಾರೆ. ಈ ಬಗ್ಗೆ ಚಿಂತನಾ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ