ಕುಕ್ಕೆ ಜಲಸಂಗ್ರಹ ಘಟಕದಲ್ಲಿ ಕ್ಲೋರಿನ್ ಸೋರಿಕೆ, ಆತಂಕ
Team Udayavani, Oct 30, 2019, 3:00 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಕಲ್ಲಪಣೆಯ ಜಲಸಂಗ್ರಹ ಘಟಕದಲ್ಲಿ ಕ್ಲೋರಿನ್ ಸೋರಿಕೆಯಾಗಿ ಉಸಿರಾಟದ ತೊಂದರೆ ಕಂಡುಬಂದು ದರಿಂದ ಸ್ಥಳೀಯರು ಮನೆ ತೊರೆದು ಹೊರಬಂದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ತಡರಾತ್ರಿ 1 ಗಂಟೆ ವೇಳೆಗೆ ಕ್ಲೋರಿನ್ ಸೋರಿಕೆಯಾಗುತ್ತಿದ್ದಂತೆ ಪರಿಸರದಲ್ಲಿ ದುರ್ವಾಸನೆ ಪಸರಿಸಿತು. ಉಸಿರಾಟದ ತೊಂದರೆಗೊಳಗಾದ ಜನರು ಭಯದಿಂದ ರಾತೋರಾತ್ರಿ ಮನೆ ತೊರೆದು ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ ಆಶ್ರಯ ಪಡೆದರು.
ಘಟನೆ ವೇಳೆ ಘಟಕದಲ್ಲಿ ಇಬ್ಬರು ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿದ್ದರು. ಕೂಡಲೇ ದೇವಸ್ಥಾನ ಹಾಗೂ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸುಳ್ಯದಿಂದ ಅಗ್ನಿಶಾಮಕ ದವರು ಬಂದು ಮುಂಜಾನೆ 5ರ ಹೊತ್ತಿಗೆ ಸೋರಿಕೆ ತಡೆಗಟ್ಟಿದರು.
50 ಕುಟುಂಬಗಳಲ್ಲಿ ಭೀತಿ: ದೀಪಾವಳಿ ಸಂಭ್ರಮಾಚರಿಸಿ ನಿದ್ರೆಗೆ ಜಾರಿದ್ದ 50ಕ್ಕೂ ಅಧಿಕ ಕುಟುಂಬಗಳ ಜನರು ಏಕಾಏಕಿ ನಡೆದ ಘಟನೆಯಿಂದ ಆತಂಕಕ್ಕೊಳಗಾಗಿದ್ದರು. ಸ್ಥಳೀಯರೆಲ್ಲರೂ ಬೆಳಗಿನ ತನಕವೂ ಭಯದಲ್ಲೇ ಇರುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ