ಸೆನ್‌, ಸೈಬರ್‌ ಪೊಲೀಸರಿಗೆ ಸಿಐಡಿಯಿಂದ ತರಬೇತಿ


Team Udayavani, Mar 21, 2022, 1:45 PM IST

ಸೆನ್‌, ಸೈಬರ್‌ ಪೊಲೀಸರಿಗೆ ಸಿಐಡಿಯಿಂದ ತರಬೇತಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ಸೈಬರ್‌ ವಂಚನೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ. ಆದರೆ, ಪತ್ತೆ ಕಾರ್ಯ ಮಾತ್ರ ನಿರೀಕ್ಷಿತ ಮಟ್ಟತಲುಪುತ್ತಿಲ್ಲ. ಕಾರಣ ಸೈಬರ್‌ ಪೊಲೀಸರಲ್ಲಿನ ಸೈಬರ್‌ ನೈಪುಣ್ಯತೆ ಕೊರತೆ ಅಥವಾ ತಾಂತ್ರಿಕ ಸಮಸ್ಯೆ. ಈ ಹಿನ್ನೆಲೆಯಲ್ಲಿ ನಗರದ ಎಂಟು ಸೈಬರ್‌, ಎಕಾನಾಮಿಕ್ಸ್‌, ನಾರ್ಕೋಟಿಕ್ಸ್‌(ಸಿಇಎನ್‌) ಠಾಣೆ ಮತ್ತು ಸೈಬರ್‌ ಕ್ರೈಂ ಠಾಣೆಯ ಅಧಿಕಾರಿ-ಸಿಬ್ಬಂದಿಗೆ “ಸೈಬರ್‌ ಕ್ರೈಂ ತರಬೇತಿ’ ಆರಂಭಿಸಲಾಗಿದೆ.

ಸಿಐಡಿಯಲ್ಲಿ ಸೈಬರ್‌ ಅಪರಾಧಗಳ ತನಿಖಾ ತರ ಬೇತಿ ಮತ್ತು ಸಂಶೋಧನಾ ಕೇಂದ್ರ(ಸಿಸಿಐಟಿಆರ್‌) ದಲ್ಲಿ ಕಾನ್‌ಸ್ಟೇಬಲ್‌ನಿಂದ ಇನ್‌ಸ್ಪೆಕ್ಟರ್‌ವರೆಗಿನ ಎಲ್ಲ ಹಂತದ ಅಧಿಕಾರಿ-ಸಿಬ್ಬಂದಿಗೆ ತರಬೇತಿ ನೀಡಲಾಗು ತ್ತಿದೆ. ಡೇಟಾ ಸೆಕ್ಯೂರಿಟಿ ಕೌನ್ಸಿಲ್‌ ಆಫ್ ಇಂಡಿಯಾ(ಡಿಎಸ್‌ಸಿಐ) ಸದಸ್ಯರು ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ತರಬೇತಿ ನೀಡುತ್ತಿದ್ದಾರೆ. 30 ಮಂದಿ ತಂಡ ಪ್ರತಿ ವಾರ ತರಬೇತಿ ಪಡೆಯು ತ್ತಿದ್ದು, ಈಗಾಗಲೇ ಮೂರು ಬ್ಯಾಚ್‌ ಮುಕ್ತಾಯಗೊಂಡಿದೆ. ಪ್ರತಿ ವಾರ 1 ಅಥವಾ ಎರಡು ವಂಚನೆ ಮಾದರಿಯನ್ನು ವಿಷಯವನ್ನಾಗಿಸಿಕೊಂಡು ತರಬೇತಿ ನೀಡಲಾಗುತ್ತದೆ.

ಈ ಪ್ರಕ್ರಿಯೆ ನಿರಂತರವಾಗಿ ನಡೆ ಯುತ್ತಿರುತ್ತದೆ. ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಸಿಸಿಬಿ ಜಂಟಿ ಆಯುಕ್ತ ರಮಣಗುಪ್ತ ಸೂಚನೆ ಮೇರೆಗೆ ನಗರದಲ್ಲಿರುವ 8 ಸೆನ್‌ ಮತ್ತು 1 ಸೈಬರ್‌ ಠಾಣೆಯ ಸಿಬ್ಬಂದಿ ತರಬೇತಿ ಪಡೆಯುತ್ತಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.

ಏನೆಲ್ಲ ತರಬೇತಿ?: ಸೈಬರ್‌ ಕ್ರೈಂ ದೂರು ಸ್ವೀಕರಿಸುವಾಗಲೇ ಕೆಲವೊಂದು ನಿರ್ದಿಷ್ಟ ಮಾಹಿತಿ ಸಂಗ್ರಹಿ ಸಿಕೊಂಡರೆ ಪ್ರಕರಣ ಪತ್ತೆ ಕಾರ್ಯ ಸುಲಭ. ಹೀಗಾಗಿ ಪ್ರಕರಣ ದಾಖಲಿಸಿಕೊಳ್ಳುವುದು ಹೇಗೆ? ಅಗತ್ಯ ಕಂಪ್ಯೂಟರ್‌, ಮೊಬೈಲ್‌ ಹೇಗೆ ಜಪ್ತಿ ಮಾಡ ಬೇಕು. ನಂತರ ಅವುಗಳ ವಿಶ್ಲೇಷಣೆ ಹೇಗೆ? ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೇಗೆ ಕಳುಹಿಸಬೇಕು? ಯಾವ ರೀತಿ ಪ್ರಶ್ನೆ ಕೇಳಬೇಕು? 5 ದಿನಗಳ ಕಾಲ ವಿಷಯಾ ಧಾರಿತ ತರಬೇತಿ ನೀಡಲಾಗುತ್ತದೆ. 6ನೇ ದಿನ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲಾಗುತ್ತದೆ. ಅದರಿಂದ ತರಬೇತಿ ಪಡೆದ ಸಿಬ್ಬಂದಿಯಲ್ಲೂ ಆತ್ಮವಿಶ್ವಾಸ ಮೂಡುತ್ತದೆ. ಜತೆಗೆ ಇತ್ತೀಚೆಗೆ ಹೆಚ್ಚುತ್ತಿರುವ ಬ್ಯಾಂಕಿಂಗ್‌ ವಂಚನೆ, ಒಟಿಪಿ, ವಿತ್‌ ಔಟ್‌ ಓಟಿಪಿ ವಂಚನೆ, ಕ್ರೆಡಿಟ್‌ ಕಾರ್ಡ್‌, ಮ್ಯಾಟ್ರಿಮೋನಿಯಲ್‌, ಆ್ಯಪ್‌ ಮೂಲಕ ವಂಚನೆ, ಫೇಸ್‌ಬುಕ್‌, ಟ್ವಿಟರ್‌, ಇನ್‌ಸ್ಟ್ರಾಗ್ರಾಂ ಮೂಲಕ ವಂಚನೆಯಾದರೆ ಹೇಗೆ ಪತ್ತೆ ಹಚ್ಚಬೇಕು. ಹೀಗೆ ಎಲ್ಲ ಮಾದರಿಯ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ಸಿಸಿ ಬಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಯಾರೆಲ್ಲ ತರಬೇತಿ ಕೊಡುತ್ತಾರೆ?: ಹೆಚ್ಚುವರಿ ಪೊಲೀಸ್‌ ಆಯುಕ್ತರಾದ ಸುಬ್ರಹ್ಮೇಶ್ವರ್‌ ರಾವ್‌ (ಅಡ್ವಾನ್ಸ್‌ ಬ್ಯಾಂಕಿಂಗ್‌ ವಂಚನೆ), ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ರಮಣಗು ಪ್ತ(ಮನಿ ಲಾಡ್ರಿಂಗ್‌), ಸಿಐಡಿ ಸೈಬರ್‌ ಡಿವೈಎಸ್ಪಿಗಳಾದ, ಶರತ್‌, ಯಶವಂತ್‌(ತನಿಖಾ ಹಂತ, ಒಟಿಪಿ, ನಾನ್‌ ಒಟಿಪಿ ವಂಚನೆ ಹಾಗೂ ಇತರೆ) ಡೇಟಾ ಸೆಕ್ಯೂರಿಟಿ ಕೌನ್ಸಿಲ್‌ ಆಫ್ ಇಂಡಿಯಾ ನಿರ್ದೇಶಕ ವೆಂಕಟೇಶ್‌ ಮೂರ್ತಿ(ಕಂಪ್ಯೂಟರ್‌, ಮೊಬೈಲ್‌, ಎಲೆಕ್ಟ್ರಾ ನಿಕ್‌ ವಸ್ತುಗಳ ಜಪ್ತಿ) ಕುರಿತು ತರಬೇತಿ ನೀಡುತ್ತಾರೆ.

ಉತ್ತಮ ಬೆಳವಣಿಗೆ : ಸೈಬರ್‌ ಕ್ರೈಂ ವಂಚನೆ ಬಗ್ಗೆ ಪೊಲೀಸರಿಗೆ ತರಬೇತಿ ಕೊಡುತ್ತಿರುವುದು ಉತ್ತಮ ಬೆಳವಣಿಗೆ. ಕೆಲವೊಂದು ಕ್ಸಿಷ್ಟಕರ ಪ್ರಕರಣಗಳನ್ನು ಬೇಧಿಸಲು ಇದು ಸಹಾಯವಾಗುತ್ತದೆ. ಈಗಾಗಲೇ ಎರಡು ಬಾರಿ ತರಬೇತಿ ಪಡೆದುಕೊಂಡಿದ್ದೇನೆ. ಅದರಿಂದ ಕೆಲ ಕಠಿಣ ಪ್ರಕರಣಗಳನ್ನು ಬೇಧಿಸಿದ್ದೇನೆ ಎಂದು ಸೆನ್‌ ಠಾಣೆ ಸಿಬ್ಬಂದಿಯೊಬ್ಬರು ಸಂತಸ ವ್ಯಕ್ತಪಡಿಸಿದರು.

 

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.