ಪೌರತ್ವ ಕಾಯ್ದೆ: “ವಿದೇಶದಲ್ಲಿ ಇಲ್ಲದ ವಿರೋಧ ಭಾರತದಲ್ಲೇಕೆ?’
Team Udayavani, Dec 27, 2019, 8:01 PM IST
ಜಮಖಂಡಿ: ಅಮೆರಿಕ, ಪಾಕಿಸ್ತಾನದಲ್ಲಿ ಪೌರತ್ವ ಕಾಯ್ದೆಯಡಿ ಬೇರೆ ದೇಶದ ಜನರನ್ನು ಹೊರ ಹಾಕಿದರೆ ದೇಶದ್ರೋಹಿ ಕೆಲಸ ಆಗುವುದಿಲ್ಲ. ಆದರೆ ಭಾರತದಲ್ಲಿ ಮಾತ್ರ ಪೌರತ್ವ ಕಾಯ್ದೆ ಜಾರಿಗೆ ತಂದರೆ ದೇಶದ್ರೋಹಿ ಕೆಲಸವಾಗುತ್ತದೆ ಎನ್ನುತ್ತಾರೆ. ಅದು ಹೇಗೆ ಸಾಧ್ಯ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.
ತಾಲೂಕಿನ ಹುನ್ನೂರ-ಮಧುರಖಂಡಿ ಗ್ರಾಮದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೌರತ್ವ ಕಾಯ್ದೆ ಬಗ್ಗೆ ಸಂಪೂರ್ಣ ತಿಳಿಯದೆ ದೇಶದ ಅಭಿವೃದ್ಧಿ, ಭದ್ರತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷದ ಇತಿಹಾಸದಲ್ಲಿ ಕೆಲ ಪಕ್ಷಗಳು, ಸಂಘಟನೆಗಳು ಅಲ್ಪಸಂಖ್ಯಾತ, ದೀನ ದಲಿತರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ರೀತಿಯ ಕೆಲಸಗಳಲ್ಲಿ ತೊಡಗಿಕೊಳ್ಳಬಾರದು. ಪ್ರಪಂಚದ ಎಲ್ಲ ದೇಶಗಳಲ್ಲಿ ಭದ್ರತೆಗಾಗಿ ಇಂತಹ ಕಾನೂನು ಜಾರಿಗೆ ತಂದಿದ್ದು, ಇದು ಎಲ್ಲರಿಗೂ ತಿಳಿದಿರುವ ವಿಷಯ ಎಂದರು.
ರಾಜ್ಯ ಮತ್ತು ದೇಶದಲ್ಲಿ ದೇಶದ್ರೋಹಿಗಳು ಬಂದಿದ್ದಾರೆ. ಅವರನ್ನು ಗುರುತಿಸುವ ಸಲುವಾಗಿಯೇ ಪೌರತ್ವ ಕಾಯ್ದೆ ಅನುಷ್ಠಾನಗೊಂಡಿದೆ. ಪೊಲೀಸ್ ಇಲಾಖೆ ಮಾಡಬೇಕೆಂದು ಯೋಚನೆ ಮಾಡುವ ಬದಲಾಗಿ ದೇಶದ ಪ್ರತಿಯೊಬ್ಬ ನಾಗರಿಕರೂ ಸಹಕರಿಸಬೇಕಾಗುತ್ತದೆ. ಕೇವಲ ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆ ಅ ಧಿಕಾರಿಗಳಿಂದ ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು