2 ತಿಂಗಳಲ್ಲಿ ಪೌರಕಾರ್ಮಿಕರು ಖಾಯಂ: ಸಚಿವ ಗೋವಿಂದ ಕಾರಜೋಳ
Team Udayavani, Aug 23, 2022, 9:45 AM IST
ಮೈಸೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಮುಂದಿನ ಎರಡು ತಿಂಗಳಲ್ಲಿ ಖಾಯಂ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.
ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಕೆಲವು ಕಾನೂನು ತೊಡಕುಗಳಿವೆ. ಈಗಿರುವ ನೇಮಕಾತಿ ಕಾನೂನಿನ ಪ್ರಕಾರ ಶೇ.82 ಹುದ್ದೆಗಳನ್ನು ಬೇರೆ ಸಮಾಜದವರಿಗೆ ಕೊಡಬೇಕು ಎಂದಿದೆ. ಬೇರೆ ಸಮುದಾಯದವರು ಈ ಕೆಲಸಕ್ಕೆ ಬಂದರೂ ಇದನ್ನು ಮಾಡುವುದಿಲ್ಲ. ಅವರು ಹೊರಗುತ್ತಿಗೆ ಕೊಡುತ್ತಾರೆ. ಆಗ ಸಮಸ್ಯೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಆದ್ದರಿಂದ ವಿಶೇಷ ನೇಮಕಾತಿ ನಿಯಮ ರೂಪಿಸಲು ಸಮಿತಿ ರಚಿಸಲಾಗಿದೆ. ಅದರ ವರದಿ ಬಂದ ಬಳಿಕ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.
ಇದರೊಂದಿಗೆ ನಗರ ಪ್ರದೇಶದಲ್ಲಿರುವ 52 ಸಾವಿರ ಪೌರ ಕಾರ್ಮಿಕರೆಲ್ಲರೂ ಸರಕಾರಿ ನೌಕರರಾಗಲಿದ್ದಾರೆ ಎಂದು ಹೇಳಿದರು.
ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ರಾಜ್ಯದ ಹಲವೆಡೆ ಕೆರೆಕೆಟ್ಟೆಗಳು ಒಡೆದಿವೆ. ನಾಲೆ, ಸೇತುವೆಗಳು ಹಾನಿಗೀಡಾಗಿವೆ. ಒಟ್ಟಾರೆಯಾಗಿ ಜಲಸಂಪನ್ಮೂಲ ಇಲಾಖೆಗೆ 600 ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ.
-ಗೋವಿಂದ ಕಾರಜೋಳ, ಜಲಸಂಪನ್ಮೂಲ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ