ವಿಶ್ವ ಯುವ ಸಮ್ಮೇಳನಕ್ಕೆ ತೆರೆ


Team Udayavani, Nov 24, 2019, 3:07 AM IST

vishva-yuva

ಚಿಕ್ಕಬಳ್ಳಾಪುರ: ಸತ್ಯಸಾಯಿ ಗ್ರಾಮದಲ್ಲಿ ಮೊಳಗಿದ ಸಾಯಿ ನಿನಾದ, ಸರ್ವ ಧರ್ಮಗಳ ಸಾಮೂಹಿಕ ಪ್ರಾರ್ಥನೆ, ಬಾಬಾ ಸಂದೇಶ ಸಾರುವ ಸಂಗೀತ ಗಾಯನ, ತಲೆದೂಗಿದ ದೇಶ-ವಿದೇಶಗಳಿಂದ ಬಂದ ಭಕ್ತರು, ಸೇವೆಯಿಂದ ನಾಯಕತ್ವದೆಡೆಗಿನ ಸಾಮೂಹಿಕ ಘೋಷಣೆ…

ಹೀಗೆ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಅಲಂಕೃತ ಪ್ರೇಮಾಮೃತ ಸಭಾಂಗಣದಲ್ಲಿ ಐದು ದಿನಗಳವರೆಗೆ ಅದ್ಧೂರಿಯಾಗಿ ನಡೆದ ವಿಶ್ವ ಯುವ ಸಮಾವೇಶ ಹಾಗೂ ಭಗವಾನ್‌ ಸತ್ಯಸಾಯಿ ಬಾಬಾರ 94ನೇ ಜಯಂತ್ಯುತ್ಸವದ ಪೂರ್ವ ಸಂಭ್ರಮಕ್ಕೆ ಶನಿವಾರ ಅಂತಿಮ ತೆರೆ ಬಿದ್ದಿತು.

ಶನಿವಾರ ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕವಾಯತು ನಡೆಯಿತು. ಅದರಲ್ಲಿ ಸ್ವರ ಮೇಳ, ಅಶ್ವದಳದ ಶಿಸ್ತು ಬದ್ಧ ನಡಿಗೆ, ಸುಜ್ಞಾನ ಸುಧೆ ಸಾರುವ ವೇದಘೋಷ, ರಂಗುರಂಗಿನ ವಸ್ತ ವಿನ್ಯಾಸದಲ್ಲಿ ಮಿಂಚಿದ ನರ್ತಕಿಯರು, ಪ್ರೇಕ್ಷಕರನ್ನು ಮೋಡಿ ಮಾಡಿದ ಭಾರತೀಯ ನಾಟ್ಯಪಟುಗಳು, ವಿವಿಧ ದೇಶಗಳ ಪ್ರತಿನಿಧಿಗಳು, ಮೆರವಣಿಗೆಯಲ್ಲಿ ಕೈಮುಗಿದುಕೊಂಡು ಭಕ್ತಿ ಸಲ್ಲಿಸಿದ ಜನರು ಇವೆಲ್ಲವೂ ಭಗವಾನ್‌ ಸತ್ಯಸಾಯಿ ಬಾಬಾರವರ ಜನ್ಮ ದಿನೋತ್ಸವದ ಸಂಭ್ರಮೋಲ್ಲಾಸವನ್ನು ಇಮ್ಮಡಿಗೊಳಿಸಿದವು.

ದೇಶ, ವಿದೇಶಗಳ ಗಣ್ಯರ ಉಪಸ್ಥಿತಿ: ಬಾಬಾ ಜನ್ಮ ದಿನೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ದೇಶ-ವಿದೇಶದ ಗಣ್ಯರು, ಆಹ್ವಾನಿತ ಅತಿಥಿಗಳು ಆಗಮಿಸಿದ್ದರು. ಅದರಲ್ಲಿ ಸಿಂಗಾಪುರದ ಭಕ್ತರ ಸಮೂಹ ಗಾಯನ, ಅಯಾನ್‌ ಅಲಿ ಬಂಗೇಶ್‌ ಮತ್ತು ಅಮಾನ್‌ ಅಲಿ ಬಂಗೇಶ್‌ ಸಹೋದರರು ಸರೋದ್‌ ವಾದನದ ದ್ವಂದ್ವ ಗಾಯನಗೋಷ್ಠಿ ನಡೆಸಿ, ನೆರೆದ ಜನಸ್ತೋಮ ತಲೆದೂಗುವಂತೆ ಮಾಡಿದರು.

ನೈಜೀರಿಯಾದ ಆಡಳಿತ ಉನ್ನತಾಧಿಕಾರಿ ಕ್ರಿಸ್‌ ಸಂಡೇಈಸ್‌, ಫಿಜಿಯಾದ ಆಡಳಿತ ಉನ್ನತಾಧಿಕಾರಿ ಯೋಗೀಶ ಪೂಂಜಾ, ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ವಿಶ್ರಾಂತ ಕುಲಪತಿ ಪೊ›. ಶಶಿಧರ ಪ್ರಸಾದ್‌, ಅಮೆರಿಕದ ಖ್ಯಾತ ಉದ್ಯಮಿ ಐಸಾಕ್‌ ಟೈಗ್ರೆಟ್‌, ರಾಜೇಶ್ವರಿ ಬಿರ್ಲಾ, ಪ್ರೇಮಾ ಕೃಷ್ಣ, ಸಿ.ಶ್ರೀನಿವಾಸ್‌, ಬಿ.ಎನ್‌.ನರಸಿಂಹ ಮೂರ್ತಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

32 ದೇಶ ಗಳ 2000 ಯುವಜನರು ಭಾಗಿ: ಕಳೆದ ನ.19ರಿಂದ ಸತತ ಐದು ದಿನಗಳ ಕಾಲ ಪ್ರೇಮಾಮೃತ ಸಭಾಂಗಣದಲ್ಲಿ ನಡೆದ ವಿಶ್ವ ಯುವ ಸಮ್ಮೇಳನಕ್ಕೆ ಬಾಬಾರವರ ಜಯಂತ್ಯುತ್ಸವ ಆಚರಣೆಯೊಂದಿಗೆ ವಿಧ್ಯುಕ್ತವಾಗಿ ತೆರೆಬಿದ್ದಿತು. ಸಮ್ಮೇಳನದಲ್ಲಿ ಜಗತ್ತಿನ 32 ದೇಶಗಳ ಸುಮಾರು 2 ಸಾವಿರಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಭಾಗವಹಿಸಿದ್ದರು.

ಸೇವೆಯಿಂದ ನಾಯಕತ್ವದೆಡೆ ಎಂಬ ಘೋಷಣೆಯಡಿ ನಡೆದ ಜಾಗತಿಕ ಯುವ ಸಮಾವೇಶದಲ್ಲಿ ದೇಶ ಹಾಗೂ ಜಗತ್ತಿನ ಸಮಸ್ಯೆ, ಸವಾಲುಗಳ ಕುರಿತು ಚಿಂತನ, ಮಂಥನ ನಡೆಯಿತು. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಸಂಪನ್ಮೂಲ ವ್ಯಕ್ತಿಗಳು, ಆಧ್ಯಾತ್ಮಿಕ, ಧಾರ್ಮಿಕ, ಸಾಂಸ್ಕೃತಿಕ ಚಿಂತಕರು ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದ್ದರು.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.