ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ 


Team Udayavani, Jul 31, 2021, 8:09 PM IST

rreewrre

ಮಂಗಳೂರು : ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಉಪಯುಕ್ತ ಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರನ್ನು ಅಭಿನಂದಿಸಿದರು.

ಕೋವಿಡ್‍ ಸೋಂಕಿತರಿಗೆ ಚಿಕಿತ್ಸೆಗೆ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಅವುಗಳಲ್ಲಿ ಈಗಾಗಲೇ 8 ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ, ಉಳಿದವುಗಳನ್ನು ಮುಂದಿನ 2 ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಡಿಸಿ ಡಾ.ರಾಜೇಂದ್ರ ಅವರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಕೋವಿಡ್ ನಿರ್ವಹಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯದ್ದು ಸವಾಲಿನ ಕೆಲಸವೇ ಆಗಿದೆ, ಏಕೆಂದರೆ ನೆರೆಯ ಕೇರಳದಲ್ಲಿ ಇದೀಗ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲಿಂದ ಪ್ರತಿನಿತ್ಯ ಹಲವು ಕಾರ್ಯಗಳಿಗೆ ರಸ್ತೆಯ ಮೂಲಕ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚು, ಆದ ಕಾರಣ ಸೋಂಕು ನಿಯಂತ್ರಿಸಲು ಮುಂಬರುವ 15 ದಿನಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದ ಮುಖ್ಯಮಂತ್ರಿಗಳು, ಜಿಲ್ಲೆಯ ಗಡಿ ಭಾಗಗಳಲ್ಲಿ ತೆರೆಯಲಾಗಿರುವ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ನಿರ್ದೇಶನ ನೀಡಿದರು.

ಗಡಿ ದಾಟುವ ಪ್ರತಿಯೊಬ್ಬರಲ್ಲಿಯೂ ನೆಗೆಟಿವ್ ವರದಿ ಇರಬೇಕು. ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು ಹಾಗೂ ಅವರ ಸಂಪರ್ಕವನ್ನು ಪತ್ತೆ ಹಚ್ಚಬೇಕು. ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಆಗಮಿಸುವವರಿಗೆ ಪ್ರತಿ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ತಪಾಸಣಾ ಫಲಿತಾಂಶವನ್ನು ಪರಿಶೀಲಿಸಬೇಕು. ಪ್ರಮುಖವಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅಲ್ಲಿ ರ್ಯಾಟ್ ಟೆಸ್ಟ್ ಮಾಡಬೇಕು, ಹೆಚ್ಚು ಜನರು ರೈಲಿನ ಮೂಲಕ ಬರುವ ಕಾರಣ ಅಲ್ಲಿ ಕೋವಿಡ್ ಟೆಸ್ಟ್ ಮಾಡುವ ಕೌಂಟರುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಕೋವಿಡ್ ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದದ್ರೇ ದಂಡ ವಿಧಿಸಬೇಕು, ಮಾಸ್ಕ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಗಡಿ ಭಾಗದ ತಪಾಸಣೆಗೆ ಪ್ರವಾಸ ಕೈಗೊಂಡು ಸ್ಥಿತಿ-ಗತಿಗಳನ್ನು ಅವಲೋಕಿಸುವುದಾಗಿಯೂ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿರುವ ವಿಡಿಯೋ ಕಾನ್ಪರೆನ್ಸ್ ಹಾಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಒಂದು ವಾರ ಕೇರಳ ರಾಜ್ಯದ ಕಾಸರಗೋಡಿಗೆ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ, ಅಲ್ಲಿಂದ ಬಂದಂತಹ ವಿದ್ಯಾರ್ಥಿಗಳನ್ನು ಒಂದು ವಾರ ಕ್ವಾರಂಟೈನ್ ಮಾಡಲಾಗುತ್ತದೆ, ಜಿಲ್ಲೆಯಲ್ಲಿ ಗಡಿ ಭಾಗದಲ್ಲಿ 12 ಕಡೆ ಚೆಕ್‍ಪೋಸ್ಟ್ ರಚಿಸಲಾಗಿದೆ, ಅದರಲ್ಲಿ 6 ರಸ್ತೆ ಹಾಗೂ 6 ರೈಲ್ವೇ ಸ್ಟೇಷನ್‍ಗಳಲ್ಲಿ, ಅವುಗಳಲ್ಲಿ ತಲಪಾಡಿ ಚೆಕ್‍ಪೋಸ್ಟ್ ಅತಿ ಮುಖ್ಯವಾದದ್ದಾಗಿದೆ, ಅಲ್ಲಿ 24/7 ಕಾಲ ತಪಾಸಣೆ ಮಾಡಲಾಗುತ್ತಿದೆ. ವೈದ್ಯಕೀಯ ತುರ್ತು ಸೇವೆಗೆ ಹೊರತು ಪಡಿಸಿ, ಇತರೆ ಸಂಚಾರವನ್ನು ನಿಷೇಧಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,  ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಸಹಾಯಕ ಆಯುಕ್ತ ಮದನ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ವಿಡಿಯೋ ಕಾನ್ಪರೆನ್ಸ್‍ನಲ್ಲಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.