ಸರಕಾರ, ಖಾಸಗಿ ಸಂಸ್ಥೆಗಳು ಒಗ್ಗೂಡಿ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ


Team Udayavani, May 12, 2022, 10:30 PM IST

Untitled-1

ಬೆಂಗಳೂರು: ಸರಕಾರ ಮತ್ತು ಖಾಸಗಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ನವ ಕರ್ನಾಟಕ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಅಶೋಕ ಹೊಟೇಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಟನೆಲಿಂಗ್‌ ಮತ್ತು ಅಂಡರ್‌ಗ್ರೌಂಡಿಂಗ್‌ ಕನ್‌ಸ್ಟ್ರಕ್ಷನ್‌ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ  “ನಿರ್ಮಾಣ 2022’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬದಲಾದ ಕಾಲಘಟ್ಟದಲ್ಲಿ ನಮ್ಮ ಮುಂದೆ ಸವಾಲುಗಳು ಸಾಕಷ್ಟಿವೆ. ಅದೇ ರೀತಿ, ತಂತ್ರಜ್ಞಾನವೂ ಬೆಳೆದಿದೆ. ಈ ತಂತ್ರಜ್ಞಾನಗಳ ನೆರವಿನೊಂದಿಗೆ ಹೊಸ ಸವಾಲುಗಳನ್ನು ಎದುರಿಸಲು ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಒಂದೇ ವೇದಿಕೆಯಲ್ಲಿ  ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸುರಂಗ ಮಾರ್ಗ ನಿರ್ಮಾಣ ಹೊಸದಲ್ಲ. ಟನೆಲ್‌ ಬೋರಿಂಗ್‌ ಯಂತ್ರ(ಟಿಬಿಎಂ)ಗಳು ಇಲ್ಲದಿದ್ದಾಗಲೂ 70ರ ದಶಕದಲ್ಲಿ ರಾಜ್ಯದಲ್ಲಿ ಟನೆಲ್‌ಗ‌ಳನ್ನು ಕಾಣಬಹುದು. ಆದರೆ, ಅಂದು ನೀರಾವರಿ ಮತ್ತಿತರ ಉದ್ದೇಶಗಳಿಗೆ ಈ ಸುರಂಗಗಳ ನಿರ್ಮಾಣಗೊಳ್ಳುತ್ತಿದ್ದವು. ಈಗ ಬೆಂಗಳೂರಿನಂತಹ ದಟ್ಟಣೆ ಪ್ರದೇಶದಲ್ಲಿ ಮೆಟ್ರೋ, ಅನಿಲ ಸಂಪರ್ಕ ಸಹಿತ ಹಲವು ಉದ್ದೇಶಗಳಿಗೆ ಸುರಂಗ ನಿರ್ಮಿಸುವುದು ದೊಡ್ಡ ಸವಾಲಾಗಿದೆ ಎಂದರು.

ಸುರಂಗ ನಿರ್ಮಾಣ ಕಾರ್ಯದಲ್ಲಿ ತಳಮಟ್ಟದಲ್ಲಿ ಅಂದರೆ ಸುರಂಗದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಈ ವಲಯದ ನಿಜವಾದ ಆಸ್ತಿ. ಅನಂತರದಲ್ಲಿ ಬರುವುದು ತಂತ್ರಜ್ಞಾನ. ಈ ಎರಡೂ ಆಸ್ತಿಗಳನ್ನು ಕಾಪಾಡುವ ಮಹತ್ತರ ಜವಾಬ್ದಾರಿ ಎಂಜಿನಿಯರ್‌ಗಳ ಮೇಲಿದೆ ಎಂದು ಕಿವಿಮಾತು ಹೇಳಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ. ಭವಿಷ್ಯದಲ್ಲೂ ಈ ಸ್ಥಾನವನ್ನು ಕಾಯ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿರ್ಮಾಣ್‌-2022 ಸಂಘಟನಾ ಸಮಿತಿ ಅಧ್ಯಕ್ಷ ಬಿ.ಎ. ಮಧುಕರ್‌, ಸಮ್ಮೇಳನ ಅಧ್ಯಕ್ಷ ಟಿ.ಎಸ್‌. ಗುರುರಾಜ್‌, ಪ್ರಧಾನ ಕಾರ್ಯದಶಿ ಎಂ. ರವಿಶಂಕರ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌, ರೈಲ್ವೆ ಇನ್‌ಫ್ರಾಸ್ಟ್ರಕ್ಚರ್‌ ಡೆವೆಲಪ್‌ಮೆಂಟ್‌ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಅಮಿತ ಗರ್ಗ್‌ ಸೇರಿದಂತೆ ಇತರೆ ನಿರ್ಮಾಣ ಕಂಪೆನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುರಂಗ ಮಾರ್ಗ; ಮಣ್ಣಿನ ಗುಣ ಅರಿವಿನ ಕೊರತೆ :

ಸುರಂಗ ಕೊರೆಯುವ ಕಾರ್ಯಕ್ಕೆ ಕೈಹಾಕುವ ಮುನ್ನ ಮಣ್ಣಿನ ಗುಣಧರ್ಮ ಅರಿವಿನ ಕೊರತೆಯೇ ಎಂಜಿನಿಯರ್‌ಗಳ ಪ್ರಮುಖ ಸಮಸ್ಯೆಯಾಗಿದ್ದು, ಇದು ಸುರಂಗ ಕಾಮಗಾರಿಯ ವಿಳಂಬದಲ್ಲಿ ಪರಿಣಮಿಸುತ್ತಿದೆ ಎಂದು ಗುರ್‌ಗಾಂನ ಟನೆಲಿಂಗ್‌ ಎಂಜಿನಿಯರ್‌ ತಜ್ಞ ಡಾ.ಮನೋಜ್‌ ವರ್ಮನ್‌ ತಿಳಿಸಿದರು.

ನಿರ್ಮಾಣ-2022 ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಗುರುವಾರ ಸುರಂಗ ಕೊರೆಯಲು ಇರುವ ಸವಾಲುಗಳ ಕುರಿತು ಮಾತನಾಡಿದ ಅವರು,  ಕೆಲ ಅನುಭವಿ ಎಂಜಿನಿಯರ್‌ಗಳು ಹಿಮಾಲಯದಲ್ಲೇ ಸುರಂಗ ಕಾಮಗಾರಿ ಯಶಸ್ವಿಯಾಗಿ ಪೂರೈಸಿದ ನನಗೆ ಇದು ಯಾವ ಲೆಕ್ಕ ಎಂಬ ಉದಾಸೀನ ಮಾಡುತ್ತಾರೆ. ಇನ್ನು ಹಲವರು ಮಣ್ಣಿನ ಗುಣಧರ್ಮವನ್ನು ತಿಳಿಯುವಲ್ಲಿ ಎಡವುತ್ತಾರೆ. ಕೆಲವು ಸಲ ಮಣ್ಣಿನ ಗುಣ ಅರಿತಿದ್ದರೂ, ಲೆಕ್ಕಾಚಾರ ಉಲ್ಟಾ ಆಗುತ್ತದೆ’ ಎಂದು ಹೇಳಿದರು.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.