ಸಿದ್ದರಾಮಯ್ಯ ಕಟು ಸತ್ಯ ಎದುರಿಸುವ ಕಾಲ ಬಂದಿದೆ: ಸಿಎಂ ಬೊಮ್ಮಾಯಿ
Team Udayavani, Feb 26, 2023, 6:44 AM IST
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸುಳ್ಳು ಹೇಳಿದ್ದಾರೆಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಅವರು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಅವರೇ ನೇಮಿಸಿದ್ದ ನ್ಯಾ.ಕೆಂಪಣ್ಣ ಅವರ ಆಯೋಗವು ಸುದೀರ್ಘವಾಗಿ ಸಾûಾÂಧಾರಗಳನ್ನು ಕಲೆ ಹಾಕಿ ತನಿಖೆ ನಡೆಸಿದ ವರದಿಯನ್ನು ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ.
ಅಧಿಕಾರಿಗಳು ಕಡತ ತಂದರು ಅನುಮೋದಿಸಿದೆ ಎಂದು ಬರೆದಿರುವುದಾಗಿ ಅವರೇ ಹೇಳಿರುವುದರ ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು.
ಅಡ್ವೊಕೇಟ್ ಜನರಲ್ ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ. ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅದನ್ನೇ ನಾನು ಹೇಳಿದ್ದು. ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.