ಸಿಎಂ ಬೊಮ್ಮಾಯಿ ಸಾಧನೆ, ವ್ಯಕ್ತಿತ್ವದ ಧ್ವನಿಸುರುಳಿ ಬಿಡುಗಡೆ
Team Udayavani, Oct 11, 2022, 6:45 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಾಧನೆಗಳು ಮತ್ತು ವ್ಯಕ್ತಿತ್ವ ಈಗ ಹಾಡುಗಳ ರೂಪದಲ್ಲಿ ಕೇಳಬಹುದಾಗಿದೆ. ಈ ಸಂಬಂಧದ ವೀಡಿಯೋ ಸಹಿತ ಧ್ವನಿಸುರುಳಿಯನ್ನು ಮುಖ್ಯಮಂತ್ರಿಗಳ ಅಭಿಮಾನಿ ಬಳಗ ಹೊರತಂದಿದೆ.
ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು, ಪೌರಕಾರ್ಮಿಕರು ಹೀಗೆ ಸಮಾಜದ ವಿವಿಧ ವರ್ಗಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಕೊಡುಗೆಗಳನ್ನು ಆಧರಿಸಿ ಒಟ್ಟಾರೆ ಐದು ಹಾಡುಗಳನ್ನು ಅಭಿಮಾನಿ ಬಳಗ ರಚಿಸಿದೆ.
ಸಿಎಂ ಒಬ್ಬ ಸಾಮಾನ್ಯ ವ್ಯಕ್ತಿ (ಕಾಮನ್ ಮ್ಯಾನ್) ಆಗಿ ಕೂಡ ಹೇಗೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂಬುದರ ಬಗ್ಗೆಯೂ ಹಾಡು ರಚಿಸಲಾಗಿದ್ದು, ಅದಕ್ಕೆ ಸಂಗೀತದ ಜತೆಗೆ ವೀಡಿಯೋ ತುಣುಕುಗಳನ್ನು ಸಂಯೋಜನೆ ಮಾಡಲಾಗಿದೆ.
ರೈತರ ಮಕ್ಕಳಿಗೆ ವಿದ್ಯಾನಿಧಿ, ಮಹಿಳೆಯರ ಸ್ವಾವಲಂಬನೆಗಾಗಿ ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡಿರುವುದು, ಅಮೃತ ಯೋಜನೆ ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉಲ್ಲೇಖೀಸಲಾಗಿದೆ.
ನಗರದ ಕ್ಯಾಪಿಟಲ್ ಹೊಟೇಲ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಐದೂ ಹಾಡುಗಳ ಧ್ವನಿಸುರುಳಿಯನ್ನು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಗೆ ಸಿಕ್ಕಿರುವ ಅಲ್ಪಾವಧಿಯಲ್ಲೇ ಅನೇಕ ಜನಪರ ಸಾಧನೆಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಅದನ್ನು ಹೆಚ್ಚು ವೈಭವೀಕರಿಸಿಕೊಳ್ಳದೆ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಇದು ಅವರ ಸರಳ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…