ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ: ಬಸವರಾಜ ಬೊಮ್ಮಾಯಿ
Team Udayavani, Dec 29, 2021, 11:02 AM IST
ಹುಬ್ಬಳ್ಳಿ: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಸರಕಾರದ ಆಡಳಿತ ಹಾಗೂ ಅಭಿವೃದ್ಧಿ ಮೆಚ್ಚಿ ಅಭಿನಂದನಾ ನಿರ್ಣಯ ಕೈಗೊಂಡಿರುವುದು ಸಂತಸ ತಂದಿದೆ. ಅದೇ ರೀತಿ ಪಕ್ಷದ ವರಿಷ್ಠರು ನನ್ನ ಮೇಲೆ ಇರಿಸಿದ ವಿಶ್ವಾಸ ವ್ಕಕ್ತ ಪಡಿಸಿರುವುದಕ್ಕೆ ಧನ್ಯವಾದ ಸಲ್ಲಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವರಿಷ್ಠರು, ರಾಜ್ಯದ ನಾಯಕರು ನನ್ನ ಮೇಲೆ ಇರಿಸಿದ ವಿಶ್ವಾಸ ಜವಾಬ್ದಾರಿ ಹೆಚ್ಚಿಸಿದೆ. ತಂಡವಾಗಿ ಪಕ್ಷ ಸಂಘಟನೆ ಹಾಗೂ ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ ಎಂದರು.
ಎಂಎಲ್ ಸಿಗಳಿಗೆ ಸನ್ಮಾನ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಎರಡನೇ ದಿನದ ಕಾರ್ಯ ಕ್ರಮ ಬೆಳಿಗ್ಗೆ 9:30 ಗಂಟೆಗೆ ಆರಂಭಗೊಂಡಿತು. ಸಭೆ ಆರಂಭದಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತುಗೆ ಆಯ್ಕೆಯಾದ ಪಕ್ಷದ ನೂತನ ಸದಸ್ಯರಿಗೆ ಸನ್ಮಾನಿಸಲಾಯಿತು.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಿತರರು ಇದ್ದರು.