ಖಾದಿ ಮಳಿಗೆಯಲ್ಲಿ ಪತ್ನಿಗಾಗಿ ಸೀರೆ ಖರೀದಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
Team Udayavani, Oct 2, 2021, 12:06 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಖಾದಿ ಎಂಪೋರಿಯಂನಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಿದರು. ಈ ವೇಳೆ ತಮ್ಮೊಂದಿಗಿದ್ದ ಇತರ ಸಚಿವರಿಗೂ ಬಟ್ಟೆ ಖರೀದಿಸುವಂತೆ ಸೂಚಿಸಿದರು.
ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಸಿಎಂ ಬೊಮ್ಮಾಯಿ ಗಾಂಧಿ ಭವನದ ಪಕ್ಕದಲ್ಲಿರುವ ಖಾದಿ ಎಂಪೋರಿಯಂನಲ್ಲಿ ಬಟ್ಟೆ ಖರೀದಿ ಮಾಡಿದರು. ಹತ್ತು ಜುಬ್ಬಾ ಪೀಸ್ ಗಳು ಮತ್ತು ಪತ್ನಿಗಾಗಿ ಸೀರೆ ಖರೀದಿ ಮಾಡಿದರು. ಮೂರು ಸೀರೆ ನೋಡಿ, ಕೊನೆಗೆ ಒಂದು ಸೀರೆಯನ್ನು ಸಿಎಂ ಖರೀದಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಒಟ್ಟು 16031 ಬೆಲೆಯ ಬಟ್ಟೆ ಖರೀದಿಸಿದರು.
ಇದನ್ನೂ ಓದಿ:ಜಗದೀಶ್ ಮಾತನಾಡಿದ್ದು ತಪ್ಪಾಯ್ತು…ಕರ್ನಾಟಕದಲ್ಲಿ ನಾನು ಭಿಕ್ಷುಕಿನೇ: ನಟಿ ವಿಜಯಲಕ್ಷ್ಮೀ
ಸಿಎಂ ಸೀರೆ ಖರೀದಿ ವೇಳೆ ಬಿ.ವೈ. ವಿಜಯೇಂದ್ರ ಆಗಮಿಸಿದರು. ಆಗ ಅವರಿಗೂ ಸೀರೆ ಖರೀದಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದರು. “ಬಾರಪ್ಪಾ, ಮನೆಯವರಿಗೆ ಸೀರೆ ಖರೀದಿ ಮಾಡು ಎಂದು ಸಿಎಂ ಹೇಳಿದಾಗ, “ ನಮಗೊಂದು ಸೀರೆ ಕೊಡಿ ಎಂದ ಬಿ.ವೈ.ವಿಜಯೇಂದ್ರ 4300 ರೂ ಬೆಲೆಯ ಸೀರೆ ಖರೀದಿ ಮಾಡಿದರು.
ಸಚಿವ ಗೋವಿಂದ ಕಾರಜೋಳರಿಗೆ ಸೀರೆ ತೆಗೆದುಕೊಳ್ಳಿ ಎಂದ ಸಿಎಂ ಹೇಳಿದಾಗ, “ಸಾರ್, ನನಗೆ ಅದೆಲ್ಲಾ ಗೊತ್ತಾಗಲ್ಲ” ಎಂದು ಸಚಿವ ಕಾರಜೋಳ ಹೇಳಿದರು. ಅದಕ್ಕೆ “ಈಗಲಾದ್ರೂ ಕಲಿತುಕೊಳ್ಳಿ’’ ಎಂದು ಸಿಎಂ ಹೇಳಿದರು. ಸಿಎಂ ಮಾತಿಗೆ ಕಟ್ಟು ಬಿದ್ದ ಗೋವಿಂದ ಕಾರಜೋಳ “ ಇರಲೀ, ನನಗೊಂದು ಸೀರೆ ಕೊಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ