ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ನಾಳೆಯೇ ಸೂಕ್ತ ನಿರ್ಧಾರ: ಸಿಎಂ ಬೊಮ್ಮಾಯಿ


Team Udayavani, Jun 1, 2022, 12:11 PM IST

ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ನಾಳೆಯೇ ಸೂಕ್ತ ನಿರ್ಧಾರ: ಸಿಎಂ ಬೊಮ್ಮಾಯಿ

ಮಣಿಪಾಲ: ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ಗುರುವಾರವೇ (ಜೂ.2) ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಲ್ಲಿ ಸಮಗ್ರ ವರದಿ ಕೇಳಿದ್ದೇನೆ. ಸಚಿವರು ಗುರುವಾರ ವರದಿ ನೀಡಲಿದ್ದಾರೆ. ಹಾಗೆಯೇ ವಿವಿಧ ಮಠದ ಸ್ವಾಮೀಜಿಗಳು, ಬೇರೆಯವರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪತ್ರವನ್ನು ಬರೆದಿದ್ದಾರೆ ಮತ್ತು ಪರಿಷ್ಕರಣೆಯಲ್ಲಿ ಆತಂಕ ಪಡುವ ವಿಷಯ ಏನೂ ಇಲ್ಲ ಎಂಬ ವಾದವೂ ಇದೆ. ಹೀಗಾಗಿ ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಶಿಕ್ಷಣ ಸಚಿವರ ವರದಿಯನ್ನು ಆಧರಿಸಿ, ವಾಸ್ತವಾಂಶ ಏನಿದೆ ಎಂಬುದನ್ನು ತಿಳಿದು ಜೂನ್‌ 2 ರಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಯಾರ್ಯಾರು ತಮ್ಮ ಪಠ್ಯ, ಪದ್ಯಗಳನ್ನು ವಾಪಸ್‌ ಪಡೆಯಲು ಪತ್ರ ಬರೆದಿದ್ದಾರೋ ಅವರೊಂದಿಗೂ ಮಾತುಕತೆ ನಡೆಸಲಿದ್ದೇನೆ ಎಂದರು.

ಶೀಘ್ರ ವೇತನ :

ಉಡುಪಿ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಬಿ.ಆರ್‌.ಶೆಟ್ಟಿ ವೆಂಚರ್ಸ್ ನಿಂದ ಸರಕಾರದ ಸ್ವಾಧೀನಕ್ಕೆ ಪಡೆಯಲಾಗಿದೆ. ಸ್ವಲ್ಪ ತಾಂತ್ರಿಕ ಗೊಂದಲದಿಂದ ಸಿಬಂದಿ ವರ್ಗಕ್ಕೆ ಸರಿಯಾಗಿ ವೇತನ ಆಗಿಲ್ಲ. ಕೂಡಲೇ ತಾಂತ್ರಿಕ ಗೊಂದಲ ನಿವಾರಿಸಿ, ಐದು ತಿಂಗಳ ವೇತವನ್ನು ಬಿಡುಗಡೆ ಮಾಡಲಾಗುವುದು. ಜತೆಗೆ ಮುಂದಿನ ದಿನಗಳಲ್ಲಿ ಸರಿಯಾದ  ಕ್ರಮದಲ್ಲಿ ಅವರಿಗೆ ವೇತನ ನೀಡಲು ಬೇಕಾದ ವ್ಯವಸ್ಥೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಎಸಿಬಿ ಬಲವರ್ಧನೆಯಾಗಿದೆ :

ನಮ್ಮ ಸರಕಾರ ಬಂದ ಅನಂತರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ಬಲಗೊಳಿಸಿದ್ದೇವೆ ಮತ್ತು ಅದಕ್ಕೊಂದು ಪ್ರತ್ಯೇಕ ವ್ಯವಸ್ಥೆಯೂ ಬಂದಿದೆ. ಲೋಕಾಯುಕ್ತ ಇದ್ದರೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಎಸಿಬಿಗೆ ಆಗುತ್ತಿರಲಿಲ್ಲ. ಈಗ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲು, ದಾಳಿ ನಡೆಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲೂ ಪ್ರಕರಣ ಇರುವುದರಿಂದ ಅದಕ್ಕೂ ಕಾಯುತ್ತಿದ್ದೇವೆ ಎಂದರು.

ಕಾನೂನು ಪಾಲನೆ ಮಾಡಬೇಕು :

ಲವ್‌ ಜಿಹಾದ್‌ ಹೊಸದೇನಲ್ಲ. ಮೊದಲಿನಿಂದಲೂ ಇದೆ. ಅದರ ನಿಯಂತ್ರಣಕ್ಕಾಗಿ ಕಾನೂನು ಮಾಡಿದ್ದೇವೆ. ಆ ಕಾನೂನಿನ ಅಡಿಯಲ್ಲಿ ಎಲ್ಲವನ್ನು ಪರಿಗಣಿಸಿಸುತ್ತೇವೆ. ಯಾರು ಕೂಡ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.