ಕೂಡಲ ಸಂಗಮ ಬಸವತತ್ವದ ಅರಿವು ಮೂಡಿಸುವ ತಾಣವಾಗಬೇಕು: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
Team Udayavani, Jul 7, 2022, 9:00 PM IST
ಬೆಂಗಳೂರು: ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು ಹಾಗೂ ಬಸವ ತತ್ವದ ಅರಿವು ಮೂಡಿಸಬೇಕು. ಇದಕ್ಕೆ ಪೂರಕವಾಗಿ ಕೂಡಲಸಂಗಮವನ್ನು ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಿವಿಲ್ ಕಾಮಗಾರಿಗಳ ಜೊತೆಗೆ, ಕೂಡಲ ಸಂಗಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮ್ಯೂಸಿಯಂನಲ್ಲಿ ಬಸವಣ್ಣನವರ ಜೀವನಚರಿತ್ರೆ, ಅವರ ವಿಚಾರಧಾರೆ ಹಾಗೂ ಅವರ ಸಮಕಾಲೀನ ಶರಣರ ಕುರಿತ ಮಾಹಿತಿಯನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಸಲು ಸೂಚಿಸಿದರು. ಇದಕ್ಕೆ ಅತ್ಯುತ್ತಮ ಮ್ಯೂಸಿಯಂ ಕ್ಯುರೇಟರ್ ಅವರನ್ನು ನೇಮಕ ಮಾಡಿಕೊಳ್ಳುವಂತೆ ತಿಳಿಸಿದರು.
ಮುಂದಿನ ಮೇ ಅಂತ್ಯದೊಳಗೆ ಮೊದಲ ಹಂತವನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಬಸವ ಅಂತರರಾಷ್ಟ್ರೀಯ ಕೇಂದ್ರದ ಕಟ್ಟಡದ ಪರಿಷ್ಕೃತ ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಪರಿಷ್ಕೃತ ಅಂದಾಜನ್ನು ಅನುಮೋದನೆಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ದೇವಸ್ಥಾನ ಹಾಗೂ ಮಾರಾಟ ಮಳಿಗೆಗಳು ಮುಚ್ಚಿದ್ದವು. ಈ ಹಿನ್ನೆಲೆಯಲ್ಲಿ ಕೂಡಲಸಂಗಮದ ಮಾರಾಟ ಮಳಿಗೆ ಬಾಡಿಗೆದಾರರು ಆರ್ಥಿಕ ಸಂಕಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯ ಬಾಡಿಗೆ ಮೊತ್ತ ಮನ್ನಾ ಮಾಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಪ್ರಾಧಿಕಾರದ ವ್ಯಾಪ್ತಿಯ ಶಾಸಕರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ