ಈ ಬಾರಿ ಸಿಕ್ಕೀತೇ ವಿಸ್ತರಣೆ ಒಪ್ಪಿಗೆ? ನಾಳೆ ಸಿಎಂ ದಿಲ್ಲಿಗೆ: ಸಚಿವಾಕಾಂಕ್ಷಿಗಳಲ್ಲಿ ಕನಸು
Team Udayavani, May 9, 2022, 7:10 AM IST
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಈ ಬಾರಿಯಾದರೂ ಕೈಗೂಡೀತೇ ಎಂಬ ಪ್ರಶ್ನೆ, ಕುತೂಹಲ ಜೋರಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ದಿಲ್ಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಆಕಾಂಕ್ಷಿಗಳ ನಿರೀಕ್ಷೆ ಹೆಚ್ಚಾಗಿದೆ.
ನವೆಂಬರ್ನಲ್ಲಿ ರಾಜ್ಯದಲ್ಲಿ ನಡೆಯ ಲಿರುವ ಬಂಡವಾಳ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿರುವ ವಿವಿಧ ದೇಶಗಳ ರಾಯಭಾರಿಗಳು ಮತ್ತು ಹೈಕಮಿಷನರ್ಗಳ ಜತೆಗೆ ಸಮಾಲೋಚನೆ ನಡೆಸುವುದು ಮುಖ್ಯಮಂತ್ರಿಯ ಭೇಟಿಯ ಪ್ರಮುಖ ಉದ್ದೇಶ.
ಈ ಸಭೆಯ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಅದೇ ಕಾರಣಕ್ಕಾಗಿ ಸಿಎಂ ಮಂಗಳವಾರ ರಾತ್ರಿ ಬೆಂಗಳೂರಿಗೆ ಮರಳಬೇಕಿದ್ದುದನ್ನು ಬುಧವಾರಕ್ಕೆ ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ವೇಳೆ ವರಿಷ್ಠರು ಒಪ್ಪಿದರೆ ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೀಗಾಗಿ ಈ ಬಾರಿಯ ಸಿಎಂ ದಿಲ್ಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಮುಖಂಡರ ಸೇರ್ಪಡೆ
ಚರ್ಚೆ ಸಂಭವ
ಅನ್ಯಪಕ್ಷಗಳಿಂದ ಬರುವವರನ್ನು ಸೇರಿಸಿಕೊಳ್ಳುವ ಕುರಿತಂತೆ ಮುಖ್ಯ ಮಂತ್ರಿಯು ನಡ್ಡಾ ಜತೆಗೆ ಚರ್ಚಿಸುವ ಸಾಧ್ಯತೆ ಇದೆ. ಶನಿವಾರ ಬಿಜೆಪಿಗೆ ಸೇರಿರುವ ವರ್ತೂರು ಪ್ರಕಾಶ್ ಸಹಿತ ಕೆಲವರನ್ನು ಸೇರಿಸಿಕೊಳ್ಳಲು ವರಿಷ್ಠರ ಆಕ್ಷೇಪವಿತ್ತು ಎನ್ನಲಾಗಿದೆ. ಅದೇ ಕಾರಣಕ್ಕೆ ಶನಿವಾರ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಷಿ ಮತ್ತು ಮುಖ್ಯಮಂತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಮಾತುಕತೆ ನಡೆಸಿ, ವರಿಷ್ಠರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ