ಸಂಪುಟ ವಿಸ್ತರಣೆ?: ಸಿಎಂ ಬೊಮ್ಮಾಯಿ ಇಂದು ದಿಲ್ಲಿಗೆ
Team Udayavani, Aug 25, 2021, 7:20 AM IST
ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆ. 28ಕ್ಕೆ ಒಂದು ತಿಂಗಳು ತುಂಬಲಿದೆ. ಇದಕ್ಕೆ ಪೂರಕವಾಗಿ ಶೀಘ್ರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ.
ಸಿಎಂ ಬುಧವಾರ ಹೊಸ ದಿಲ್ಲಿಗೆ ತೆರಳಲಿದ್ದು, ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಜತೆಗೆ ಚರ್ಚಿಸುವ ಸಾಧ್ಯತೆ ಇದೆ. ಸೆ. 13ರಂದು ವಿಧಾನ ಸಭೆ ಅಧಿವೇಶನ ಆರಂಭವಾಗಲಿದ್ದು, ಇದಕ್ಕೆ ಮುನ್ನ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳು ಇವೆ.
ಆನಂದ್ ಸಿಂಗ್ ಅಧಿಕಾರ ಸ್ವೀಕಾರ:
ಬಯಸಿದ ಖಾತೆ ಸಿಗಲಿಲ್ಲ ಎಂದು ಮುನಿಸಿದ್ದ ಸಚಿವ ಆನಂದ್ ಸಿಂಗ್ ಕೊನೆಗೂ ಅಧಿಕಾರ ಸ್ವೀಕರಿಸಿದ್ದಾರೆ. ವಿಕಾಸ ಸೌಧ ಕಚೇರಿಗೆ ಸಚಿವ ಆರ್. ಅಶೋಕ್, ಶಾಸಕ ರಾಜು ಗೌಡ ಜತೆಗೆ ಆಗಮಿಸಿದ ಸಿಂಗ್, ಒಲ್ಲದ ಮನಸ್ಸಿನಿಂದಲೇ ಅಧಿಕಾರ ಸ್ವೀಕರಿಸಿದರು.
ಬಿಎಸ್ವೈ ಒತ್ತಡ :
ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಡ ಹೇರುತ್ತಿದ್ದಾರೆ. ಯೋಗೇಶ್ವರ್, ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ ಅವರಿಗೆ ಅವಕಾಶ ನೀಡಿ ದರೆ, ವಿಜಯೇಂದ್ರ ಅವರಿಗೂ ನೀಡ ಬೇಕೆಂಬ ಷರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ.
ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನ ಗಳನ್ನು ಭರ್ತಿ ಮಾಡಲು ಪಕ್ಷದ ಅಧ್ಯಕ್ಷರ ಜತೆ ಚರ್ಚೆ ನಡೆಸುತ್ತೇನೆ. ಅವರ ಅಭಿಪ್ರಾಯ ಪಡೆದು ಮುಂದುವರಿಯುತ್ತೇನೆ.– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ