ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ
Team Udayavani, Oct 24, 2021, 1:35 PM IST
ವಿಜಯಪುರ: ಜಾತಿ ಮೀಸಲು ಕಲ್ಪಿಸುವ ಕುರಿತು ಹಲವು ಸಮುದಾಯಗಳಿಂದ ಬೇಡಿಕೆಗಳು ಬಂದಿವೆ. ಈ ಬಗ್ಗೆ ವರದಿ ತರಿಸಿಕೊಂಡು ನನ್ನದೇ ಅವಧಿಯಲ್ಲಿ ಕಾನೂನು ಚೌಕಟ್ಟಿನಲ್ಲಿ ಮೀಸಲು ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆ ಪ್ರಚಾರಾರ್ಥ ಹಂದಿಗನೂರು ಗ್ರಾಮದಲ್ಲಿ ರೋಡ್ ಶೋನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: 3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ
ಬರುವ ಸಂಪುಟ ಸಭೆಯಲ್ಲಿ ಮುಂಬೈ ಕರ್ನಾಟಕ ಪ್ರಾಂತ್ಯಕ್ಕೆ ಕಿತ್ತೂರ ಕರ್ನಾಟಕ ನಿರ್ಧಾರ ಕೈಗೊಳ್ಳುವುದಾಗಿ ಪ್ರಕಟಿಸಿದರು.
ಕಿತ್ತೂರ ರಾಣಿ ಚನ್ನಮ್ಮ ಅರಮನೆ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ, ಯೋಜನೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.