ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ಸಭೆ: ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚನೆ
Team Udayavani, Sep 4, 2021, 3:18 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಕೋವಿಡ್ ಕುರಿತಂತೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿರ್ವಹಣೆ, ವ್ಯಾಕ್ಸಿನ್ ಬಗ್ಗೆ ಚರ್ಚೆ ಮಾಡಿದೀವಿ. ಎಲ್ಲಾ ಕಡೆ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚಿಸಲಾಗಿದೆ ಎಂದರು.
ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಹಾಸನ, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಚರ್ಚೆಯಾಗಿದೆ. ಕೋವಿಡ್ ಪ್ರಮಾಣ, ಆಸ್ಪತ್ರೆ ದಾಖಲು, ಟೆಸ್ಟಿಂಗ್, ಲಸಿಕೆ ಬಗ್ಗೆ ವಿವರ ಪಡೆದಿದ್ದೇವೆ. ಕಾಸರಗೋಡಿನಲ್ಲಿ ಒಂದು ದಿನ ಕೋವಿಡ್ ಹೆಚ್ಚಾಗಿತ್ತು, ಉಳಿದಂತೆ ಕಳೆದ 30 ರಿಂದಲೂ ಕೋವಿಡ್ ಪ್ರಮಾಣ ಇಳಿದಿದೆ ಎಂದರು.
ಇದನ್ನೂ ಓದಿ:ಅಭಿಮಾನಿಗಳಿಂದ ಒತ್ತಾಯ ಬಂದರೆ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ನೋಡೋಣ: ಸುಮಲತಾ
ಚಾಮರಾಜನಗರ, ಹಾಸನಗಳಲ್ಲೂ ಕೋವಿಡ್ ಕಮ್ಮಿಯಾಗಿದೆ. ಉಡುಪಿಯ ಕೆಲವು ಕಡೆ ಕ್ರಮ ತಗೆದುಕೊಳ್ಳಬೇಕಿದೆ. ಎಲ್ಲಾ ಕಡೆ ಟೆಸ್ಟಿಂಗ್, ಲಸಿಕೆ ಹೆಚ್ಚಳ ಮಾಡಲು ಸೂಚಿಸಲಾಗಿದೆ. ಗಡಿ ಭಾಗದಿಂದ 20 ಕಿ.ಮೀ ವ್ಯಾಪ್ತಿಯ ಎಲ್ಲಾ ಕಡೆಯೂ ಲಸಿಕೆ, ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ. ಮಂಗಳೂರು, ಉಡುಪಿಯಲ್ಲೂ ಲಸಿಕಾಕರಣ ಹೆಚ್ಚಿಸಲು ತಿಳಿಸಲಾಗಿದೆ. 35 ಸಾವಿರ ಲಸಿಕೆ ಸಂಗ್ರಹ ಇದೆ. ಇವುಗಳ ವಿತರಣೆಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಸಾರ್ವಜನಿಕ ಗಣೇಶೋತ್ಸವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸಭೆಯಲ್ಲಿ ಗಣೇಶೋತ್ಸವ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಗಣೇಶೋತ್ಸವವನ್ನು ಯಾವ ರೀತಿ ಮಾಡಬೇಕೆಂದು ನಿರ್ಧಾರ ಮಾಡುತ್ತೇವೆ. ಈ ಸಂಬಂಧ ಗಡಿ ಜಿಲ್ಲೆಗಳನ್ನು ಪರಿಗಣಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ