
ಎಲ್ಲಾ ಗೌರವ ಸ್ಥಾನಮಾನ ಕೊಟ್ಟರೂ ಚಿಂಚನಸೂರು ಕಾಂಗ್ರೆಸ್ ಗೆ ಹೋದರು; ಸಿಎಂ ಬೊಮ್ಮಾಯಿ
Team Udayavani, Mar 21, 2023, 10:37 AM IST

ಹುಬ್ಬಳ್ಳಿ: ವಿಧಾನ ಪರಿಷತ್ತು ಸದಸ್ಯ ಬಾಬುರಾವ ಚಿಂಚನಸೂರು ಅವರು ಕಾಂಗ್ರೆಸ್ ನಿಂದ ಬಂದವರು. ಅವರಿಗೆ ಎಲ್ಲಾ ಗೌರವ, ಸ್ಥಾನಮಾನ ನೀಡಿದರೂ ಪುನಃ ಕಾಂಗ್ರೆಸ್ ಗೆ ಹೊರಟಿದ್ದಾರೆ. ಗುರುಮಠಕಲ್ಲ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಚೆನ್ನಾಗಿದೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಹಲವು ಬಾರಿ ರಾಜ್ಯಕ್ಕೆ ಬಂದು ಹೋಗಿದ್ದಾರೆ. ಭಾರತ ಜೋಡೋ ಯಾತ್ರೆ ಮಾಡಿದ್ದಾರೆ. ಇದರಿಂದ ಏನೂ ಆಗುವುದಿಲ್ಲ. ಬ್ರಿಟನ್ ವಿವಿಯಲ್ಲಿ ದೇಶ ವಿರೋಧಿ ಮಾತುಗಳನ್ನಾಡಿದ್ದಾರೆ. ದೇಶ ವ್ಯಾಪ್ತಿ ಇದಕ್ಕೆ ಖಂಡನೆ ವ್ಯಕ್ತವಾಗಿದೆ. ರಾಜ್ಯದ ಜನತೆಯೂ ಕೂಡ ರಾಹುಲ್ ಮಾತಿಗೆ ಬೆಲೆ ಕೊಡುವುದಿಲ್ಲ ಎಂದರು.
ಕಾಂಗ್ರೆಸ್ ನಾಯಕರು ಬೇರೆ ರಾಜ್ಯದಲ್ಲಿ ಈ ರೀತಿ ಸುಳ್ಳು ಭರವಸೆಗಳನ್ನು ನೀಡಿ ಈಡೇರಿಸದೇ ಇರುವುದನ್ನು ದೇಶದ ಜನ ನೋಡಿದ್ದಾರೆ. ರಾಜಾಸ್ತಾನ, ಛತ್ತೀಸಘಡ ಮತ್ತಿತರ ಕಡೆ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಜನರನ್ನು ಯಾಮಾರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಸಿಟಿಂಗ್ ಕಾರ್ಡ್ ಎಂದು ಲೇವಡಿ ಮಾಡಿದರು.
ಸಿದ್ದರಾಮಯ್ಯ ವಿರುದ್ಧ ಸಾಕಷ್ಟು ಆರೋಪಗಳಿವೆ. ಲೋಕಾಯುಕ್ತದಲ್ಲಿಯೂ ದೂರುಗಳಿವೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ಲಿಗೆ ಮಸಿಗೆ ಬುದ್ಧಿ ಹೇಳಿದಂತೆ. ಭಾರತದಲ್ಲಿ ಕಾಂಗ್ರೆಸ್ ಪತನ ಶುರುವಾಗಿದೆ. ರೀಡೋ ವಾಚ್ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿದೆ. ವಿಪಕ್ಷಗಳ 59 ಪ್ರಕರಣಗಳ ಪೈಕಿ ಕೆಲವನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇವೆ. ಕೆಲವನ್ನು ಮುಂದಿನ ದಿನಗಳಲ್ಲಿ ಕೊಡುತ್ತೇವೆ ಎಂದರು.
ಬಿಜೆಪಿ ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಇತಿಹಾಸವನ್ನು ಮರೆಮಾಚುವ ಕೆಲಸ ನಡೆದಿದೆ. ಹಲವಾರು ಪ್ರಕರಣಗಳಲ್ಲಿ ಸತ್ಯ ಮರೆಮಾಚುವ ಕೆಲಸ ನಡೆದಿದೆ. ಅವುಗಳ ಸತ್ಯ ಹೇಳಿದರೆ ಇವರಿಗೆ ತಡೆದುಕೊಳ್ಳಲಾಗಲ್ಲ. ಸತ್ಯ ಶೋಧನೆ ಆದಾಗ ಎಲ್ಲವೂ ಹೊರಗೆ ಬರುತ್ತದೆ, ಜಯ ಸಿಗುತ್ತದೆ ಎಂದು ತಿಳಿಸಿದರು.
ಸಾರಿಗೆ ನೌಕರರ ಬೇಡಿಕೆ ಈಡೇರಿಸಿದ್ದೇವೆ. ಪ್ರಮುಖ ಸಂಘಟನೆ ಮುಖಂಡರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದೇನೆ. ಮುಖಂಡರು ಆಗಮಿಸಿ ಅಭಿನಂದನೆ ಸಲ್ಲಿಸಿ ಮುಷ್ಕರ ವಾಪಸ್ ಪಡೆದಿದ್ದಾರೆ. ಪ್ರಮುಖ ಸಂಘಟನೆ ಜೊತೆ ಮಾತನಾಡಿದ್ದು, ಮುಷ್ಕರಕ್ಕೆ ಹೋಗೋ ಪ್ರಶ್ನೆಯೇ ಇಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ, ತನಿಖೆ ಮಾಡಲಿ:ಬಿ.ವೈ.ವಿಜಯೇಂದ್ರ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
