ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಪ್ರತಿಭಟನೆಗೆ ಸಿಎಂ ಬೊಮ್ಮಾಯಿ ಕಿಡಿ
Team Udayavani, Sep 13, 2021, 11:18 AM IST
ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ನಡೆಸಿದ ಎತ್ತಿನ ಗಾಡಿ ಪ್ರತಿಭಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಯುಪಿಎ ಸರ್ಕಾರ ಇದ್ದಾಗ ಕಾಂಗ್ರೆಸ್ ನವರು ಪ್ರತಿಭಟನೆ ಮಾಡಬೇಕಿತ್ತು. ಆದರೆ ಅವರು ಇವಾಗ ಹೋರಾಟ ಮಾಡುತ್ತಿದ್ದಾರೆ. ಸದನಕ್ಕೆ ಅವರು ಬರಲಿ, ಅವಾಗ ನಾನು ತಕ್ಕ ಉತ್ತರ ಕೊಡುತ್ತೇನೆ ಎಂದರು.
ಇದನ್ನೂ ಓದಿ:ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ: ಗಜಪಡೆಗೆ ‘ಅಶ್ವತ್ಥಾಮ’ ಹೊಸ ಎಂಟ್ರಿ
ಯಾದಗಿರಿ ಮಹಿಳೆ ಮೇಲೆ ದೌರ್ಜನ್ಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಸಿಎಂ ಯಾವುದೇ ಪ್ರತಿಕ್ರಿಯೆ ಕೊಡದೆ ತೆರಳಿದರು.