ರಾಜ್ಯದಲ್ಲಿ ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಅದು ಕಾಂಗ್ರೆಸ್: ಸಿಎಂ ಬೊಮ್ಮಾಯಿ ವಾಗ್ದಾಳಿ


Team Udayavani, Nov 15, 2022, 8:05 PM IST

tdy-24

ಶಿವಮೊಗ್ಗ: ಯಡಿಯೂರಪ್ಪ ಅವರು ಆರಂಭಿಸಿರುವ ಯೋಜನೆಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಬಂಗಾರಪ್ಪ ಅವರ ಸೇವೆ, ಸಾಮಾಜಿಕ ನ್ಯಾಯ ಮರೆಯಲು ಸಾಧ್ಯವಿಲ್ಲ. ಈ ಭಾಗದವರ ಹೋರಾಟದಿಂದ ಗೇಣಿದಾರರಿಗೆ ಭೂಮಿ ಸಿಕ್ಕಿದೆ. ಗೇಣಿದಾರರ ಹಕ್ಕಿಗಾಗಿ ಪಾದಯಾತ್ರೆ ಮಾಡಿದವರು ಯಡಿಯೂರಪ್ಪ‌ ಅವರು. ರಾಜ್ಯದಲ್ಲಿ ಹಿಂದುಳಿದ ವರ್ಗದವರನ್ನು ಜಾಗೃತಿ ಮಾಡಿದ್ದು ಬಂಗಾರಪ್ಪನವರು. ಬಂಗಾರಪ್ಪ ಯಾವುದೇ ಒಂದು ಪಕ್ಷವನ್ನು ನಂಬಿ ರಾಜಕಾರಣ ಮಾಡಿದವರಲ್ಲ. ಹೀಗಾಗಿಯೇ ರಾಜ್ಯದ ಎಲ್ಲ ಭಾಗದಲ್ಲಿಯೂ ಬಂಗಾರಪ್ಪ ಅವರ ಅಭಿಮಾನಿಗಳು ಸಿಗುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಆನವಟ್ಟಿಯಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಮಾತಾನಾಡಿದ ಅವರು, ಹಿಂದುಳಿದ ವರ್ಗದವರ ಹೃದಯ ಸಾಮ್ರಾಟರು ಯಾರಾದರೂ ಇದ್ದರೆ ಅದು ದೇವರಾಜ ಅರಸ್ ಹಾಗೂ ಎಸ್.ಬಂಗಾರಪ್ಪ ಎಂದು ಬಂಗಾರಪ್ಪ ಅವರನ್ನು ಹಾಡಿ ಹೊಗಳಿದರು.

ಇದನ್ನೂ ಓದಿ: IPL 2023: ಆರ್‌ ಸಿಬಿಯಲ್ಲಿ ರಿಟೈನ್‌ – ರಿಲೀಸ್‌ ಆದ ಆಟಗಾರರು ಇವರೇ ನೋಡಿ

ಹಿಂದುಳಿದವರು ಇದೀಗ ಮತ್ತೆ ಜಾಗೃತರಾಗಿದ್ದಾರೆ. ತಮ್ಮ ಬೆಂಬಲಕ್ಕೆ‌ ನಿಲ್ಲುವವರನ್ನು ಬೆಂಬಲಿಸಲು ತೀರ್ಮಾನಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಯಡಿಯೂರಪ್ಪ ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ಪರವಾಗಿ ಶಿವಮೊಗ್ಗ ಜಿಲ್ಲೆಯ ಜನ ನಿಲ್ಲಬೇಕು. ಯಡಿಯೂರಪ್ಪ ಅವರಿಂದ ಕುಮಾರ್ ಬಂಗಾರಪ್ಪ ಅವರು ತಮ್ಮ ಕ್ಷೇತ್ರಕ್ಕೆ ಸಾಕಷ್ಟು ಯೋಜನೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದರು.

ಮೂಡಿ ಹಾಗೂ ಮೂಗೂರು ಏತನೀರಾವರಿ ಯೋಜನೆಗಳು ಜನವರಿಯಲ್ಲಿ ಉದ್ಘಾಟನೆಗೊಳ್ಳಲಿವೆ. ನಾನು ಹಾಗೂ ಯಡಿಯೂರಪ್ಪ ಅವರು ಬಂದು ಈ ಕಾರ್ಯಕ್ರಮ ಉದ್ಘಾಟಿಸಲಿದ್ದೇವೆ. ಈ ಎರಡು ಯೋಜನೆಗಳು ಪೂರ್ಣಗೊಂಡರೆ ಸೊರಬ ಕ್ಷೇತ್ರದ ಜನ ವರ್ಷಕ್ಕೆ ಎರಡು ಬೆಳೆ ಬೆಳೆಯಬಹುದು. ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿಯನ್ನೂ ಸೇರಿ ಏಳು ಕ್ಷೇತ್ರದಲ್ಲೂ ಗೆಲ್ಲಲಿದ್ದೇವೆ ಎಂದು ಘೋಷಿಸಿದರು.

ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂದು ಡಿ.ಕೆ.ಶಿವಕುಮಾರ್ ಹೇಳಲಿ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜಾತಿ ಧರ್ಮ ಧರ್ಮ ಒಡೆಯುವ ಕೆಲಸ ಮಾಡಿದ್ದರು. ಹಿಂದುಳಿದ ವರ್ಗವನ್ನು ಒಡೆದು ಹಿಂದುಳಿದ ವರ್ಗದ ನಾಯಕರು ಬೆಳೆಯದಂತೆ ಮಾಡಿದರು‌. ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಒಬ್ಬರಾದರೂ ಹಿಂದುಳಿದ ನಾಯಕರನ್ನು ಬೆಳೆಸಿದ್ದಾರೆಯೇ ಹೇಳಲಿ. ಸಿದ್ದು ಅಹಿಂದಾ ಅಹಿಂದ ಎಂದರು ಅವರು ಮಾತ್ರ ಮುಂದೆ ಹೋದರು‌ ರಾಜ್ಯದಲ್ಲಿ ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಅದು ಕಾಂಗ್ರೆಸ್ ಎಸ್ ಸಿ, ಎಸ್ ಎಸ್‌ ಟಿ ಮಕ್ಕಳಿಗೆ ನೀಡುವ ಹಾಸಿಗೆ ದಿಂಬಿನಲ್ಲಿಯೂ ಕಾಂಗ್ರೆಸ್ ದುಡ್ಡು ಮಾಡಿದೆ. ಅನ್ನಕ್ಕೆ‌ ಕನ್ನ ಹಾಕಿದ್ದು ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಅನ್ನಭಾಗ್ಯದ ಅಕ್ಕಿ ನೀಡಿದ್ದು ನರೇಂದ್ರ‌ ಮೋದಿ ಆದರೆ ಫೊಟೋ ಹಾಕೊಂಡು ವಿತರಣೆ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ. ಇದೀಗ ವಯಸ್ಸಾಯಿತು ಮತ್ತೊಮ್ಮೆ ಅಧಿಕಾರ ಕೊಡಿ ಎನ್ನುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಸಿದ್ದರಾಮಯ್ಯಗೆ ಅಧಿಕಾರ ಕೊಡಬೇಕು. ಸಿದ್ದರಾಮಯ್ಯ ಅಂತಹ ಅವಿವೇಕಿಗಳು, ಕೀಳು ಮಟ್ಟದ ಮನಸ್ಥಿತಿಯವರು ಯಾರೂ ಇಲ್ಲ ಎಂದು ಕಿಡಿಕಾಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.